ಕೆಲ ತಿಂಗಳ ಹಿಂದೆ ಈರುಳ್ಳಿ ಬೆಲೆ ಗಗನಕ್ಕೇರಿತ್ತು. ಕೊಳ್ಳುವವರು ಕಣ್ಣೀರಿಡುವ ಸ್ಥಿತಿ ಬಂದೊದಗಿತ್ತು. ಈಗ ಕಾಲ ಬದಲಾಗಿದೆ. ಈರುಳ್ಳಿ ಬೆಲೆ ಪಾತಾಳ ಮುಖಿಯಾಗಿದೆ. ಹೀಗಾದರೆ ನೇಗಿಲಯೋಗಿ ಬದುಕುವುದೆಂತು?
ಆತ ಸಾಲದ ಸುಳಿಯಲ್ಲಿ ಸಿಕ್ಕಿ ನೇಣಿಗೆ ಕೊರಳೊಡ್ಡುವ ಮುನ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈರುಳ್ಳಿಗೆ ಬೆಂಬಲ ಬೆಲೆ ಘೋಷಿಸಿ ರೈತರ ನೆರವಿಗೆ ಧಾವಿಸಬೇಕಾದುದು ಈಗಿನ ಅಗತ್ಯ.
ಕಲಬುರ್ಗಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.