ADVERTISEMENT

ಕೃಪಾಂಕ ನೀಡಿ

ಸಂಪತ್ ಬೆಟ್ಟಗೆರೆ
Published 12 ಫೆಬ್ರುವರಿ 2016, 19:30 IST
Last Updated 12 ಫೆಬ್ರುವರಿ 2016, 19:30 IST

ರಾಜ್ಯದಾದ್ಯಂತ ಒಂದು ತಿಂಗಳಿನಿಂದ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರದಲ್ಲಿ ನಿರತರಾಗಿದ್ದಾರೆ. ಉಪನ್ಯಾಸಕರು ತರಗತಿ ಬಹಿಷ್ಕರಿಸಿದ್ದಾರೆ.

ಸೆಮಿಸ್ಟರ್ ಪಠ್ಯಕ್ರಮವನ್ನು ಕ್ರಮಬದ್ಧವಾಗಿ ಅಭ್ಯಾಸ ಮಾಡಬೇಕಾದ ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ಇದರಿಂದ ತೊಂದರೆಯಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಇನ್ನಾದರೂ ಕ್ರಮ ಕೈಗೊಳ್ಳದಿದ್ದರೆ ಉನ್ನತ ಶಿಕ್ಷಣವು ಅವ್ಯವಸ್ಥೆಯ ಆಗರವಾಗುವುದರಲ್ಲಿ ಸಂಶಯವೇ ಇಲ್ಲ.

ಕಾಯಂ ಉಪನ್ಯಾಸಕರ ನೇಮಕಕ್ಕೆ ಪರೀಕ್ಷೆ ದಿನಾಂಕವನ್ನು ಈಗಾಗಲೇ ಪ್ರಕಟಿಸಲಾಗಿದೆ. ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ಅರ್ಹರಿಗೆ ಕೃಪಾಂಕ ನೀಡಿದರೆ ಯಾವುದೇ ಗೊಂದಲವಿಲ್ಲದೆ ಸಮಸ್ಯೆ ಬಗೆಹರಿಯಬಹುದು. ಉನ್ನತ ಶಿಕ್ಷಣ ಇಲಾಖೆ ಈ ನಿಟ್ಟಿನಲ್ಲಿ ಗಮನ ಹರಿಸಲಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT