ADVERTISEMENT

ಗುಳೆ ತಡೆಯಿರಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2017, 19:30 IST
Last Updated 22 ಜೂನ್ 2017, 19:30 IST

ಗುಳೆ ಹೋಗುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದರೂ, ಗುಳೆ ನಿಂತಂತೆ ಕಾಣಿಸುತ್ತಿಲ್ಲ, ಬದಲಿಗೆ ವರ್ಷದಿಂದ ವರ್ಷಕ್ಕೆ ಗುಳೆ ಹೋಗುವವರ ಸಂಖ್ಯೆ ಹೆಚ್ಚಾದಂತೆ ಕಾಣಿಸುತ್ತದೆ.

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುವುದಾಗಿ ಸರ್ಕಾರ ಹೇಳಿದರೂ ಜನರ ಜೀವನಕ್ಕೆ ಅದು ಸಾಕಾಗುತ್ತಿಲ್ಲ. ಬರಪೀಡಿತ ಪ್ರದೇಶಗಳ ಜನರು ಮಕ್ಕಳ ಸಮೇತವಾಗಿ ಗುಳೆ ಹೋಗುತ್ತಿದ್ದಾರೆ. ಇದರಿಂದ  ಮಕ್ಕಳ ವಿದ್ಯಾಭ್ಯಾಸ ಮೊಟಕಾಗುತ್ತದೆ.  ಸರ್ಕಾರ ಇತ್ತ ಗಮನ ಹರಿಸಿ ಗುಳೆ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು.
-ರಾಘವೇಂದ್ರ ಜಂಗ್ಲಿ, ಗಂಗಾವತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT