ADVERTISEMENT

ಜಾತಿ ರಾಜಕೀಯ ಬೇಡ

​ಪ್ರಜಾವಾಣಿ ವಾರ್ತೆ
Published 25 ಮೇ 2016, 19:32 IST
Last Updated 25 ಮೇ 2016, 19:32 IST

ರಾಜ್ಯ ಸರ್ಕಾರ ನಡೆಸಿದ ಜಾತಿ ಸಮೀಕ್ಷೆ ಹೊರಬೀಳುವ ಹೊಸ್ತಿಲಲ್ಲೆ ಸಮೀಕ್ಷೆ ಬೇಕಿತ್ತೇ ಬೇಡವೇ ಎನ್ನುವ ಚರ್ಚೆಗಳು ಆರಂಭವಾಗಿವೆ. ಸಾಮಾಜಿಕ ನ್ಯಾಯ ಕೊಡಿಸುತ್ತೇವೆ ಎಂದು ಹೇಳಿಕೊಂಡು ಸಮೀಕ್ಷೆ ನಡೆಸಿರುವ ಸರ್ಕಾರ ಹಾಗೇ ನಡೆದುಕೊಂಡರೆ  ಸ್ವಾಗತಾರ್ಹ. ಆದರೆ ಅದನ್ನು ರಾಜಕೀಯವಾಗಿ ಬಳಸಿಕೊಂಡರೆ ಖಂಡಿಸಲೇ ಬೇಕಾಗುತ್ತದೆ.

ಸಮೀಕ್ಷೆ ಸಮಾಜವನ್ನು ಒಡೆಯುತ್ತದೆ ಎಂಬ ಕೆಲವರ ಹೇಳಿಕೆಗಳು ಜನರನ್ನು ಗೊಂದಲಕ್ಕೀಡು ಮಾಡಿವೆ. ಸಮೀಕ್ಷೆಯಿಂದ ಜಾತಿ ರಾಜಕೀಯ ಮಾಡದೆ ಸಾಮಾಜಿಕ ನ್ಯಾಯ ಸಿಗುವಂತಾದರೆ ಅಂಬೇಡ್ಕರ್ ಅವರ ಕನಸನ್ನು ನನಸು ಮಾಡಿದಂತಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.