ಬಂಡೀಪುರದ ರಾಷ್ಟ್ರೀಯ ಉದ್ಯಾನದಲ್ಲಿ ಬೇಟೆಗಾರರು ಇಟ್ಟಿದ್ದ ಸಿಡಿಮದ್ದಿನ ಸ್ಫೋಟಕ್ಕೆ ಪ್ರಿನ್ಸ್ ಎಂಬ ಹುಲಿ ಆಹುತಿಯಾಗಿದೆ. ನೀರು ಮತ್ತು ಆಹಾರದ ಕೊರತೆಯಿಂದ ಪ್ರಾಣಿಗಳು ಸಾಯುತ್ತಿರುವ ಈ ಕಾಲದಲ್ಲಿ ಬೇಟೆಗಾರರ ಉಪಟಳ ಹೊಸ ಸಮಸ್ಯೆ ಸೃಷ್ಟಿಸಿದೆ.
ಬೇರೆಬೇರೆ ಕಾರಣಕ್ಕೆ ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ ಹತ್ತು ಹುಲಿಗಳು ಮೃತಪಟ್ಟಿವೆ. ಇದು ಹೀಗೇ ಮುಂದುವರೆದರೆ ಕರ್ನಾಟಕದಲ್ಲಿ ಹುಲಿ ಸಂತತಿ ನಶಿಸಿ ಹೋಗುವುದರಲ್ಲಿ ಅನುಮಾನವಿಲ್ಲ.
-ಹರೀಶ ಸಿ., ದಾವಣಗೆರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.