ADVERTISEMENT

ಪರೀಕ್ಷೆ ಮುಂದೂಡಿ

ನಾಗಯ್ಯ ಎಸ್.ಜೆ., ಬಾದಾಮಿ
Published 31 ಆಗಸ್ಟ್ 2015, 19:30 IST
Last Updated 31 ಆಗಸ್ಟ್ 2015, 19:30 IST

ಕರ್ನಾಟಕ ಲೋಕಸೇವಾ ಆಯೋಗವು ಎಫ್‌ಡಿಎ ಹಾಗೂ ಎಸ್‌ಡಿಎ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಅಕ್ಟೋಬರ್‌ 4ರಂದು ನಡೆಯಲಿದೆ. ಆದರೆ ಅದೇ ದಿನ ಕೇಂದ್ರೀಯ ವಿದ್ಯಾಲಯದ ಟಿಜಿಟಿ ಪರೀಕ್ಷೆಯೂ ನಿಗದಿಯಾಗಿದೆ.

ಎರಡೂ ಪರೀಕ್ಷೆಗಳನ್ನು ತೆಗೆದುಕೊಂಡ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಯಾವುದಾದರೊಂದು ಪರೀಕ್ಷೆಯಿಂದ ವಂಚಿತರಾಗಬೇಕಾಗುತ್ತದೆ. ಪರೀಕ್ಷಾರ್ಥಿಗಳ ಹಿತದೃಷ್ಟಿಯಿಂದ ಲೋಕಸೇವಾ ಆಯೋಗವು ಪರೀಕ್ಷಾ ದಿನಾಂಕವನ್ನು ಮುಂದೂಡಿ ಅನುಕೂಲ ಮಾಡಿಕೊಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.