ADVERTISEMENT

ರಸ್ತೆ ದುರಸ್ತಿಗೊಳಿಸಿ

ಕುಂದು ಕೊರತೆ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 31 ಆಗಸ್ಟ್ 2015, 19:30 IST
Last Updated 31 ಆಗಸ್ಟ್ 2015, 19:30 IST

ಮಾರತ್‌ಹಳ್ಳಿಯಿಂದ ವೈಟ್‌ಫೀಲ್ಡ್‌ ಕಡೆಗೆ ತೆರಳುವ ರಸ್ತೆಯೂ ಸಂಪೂರ್ಣ ಹದಗಟ್ಟಿದ್ದು, ಸಂಚಾರಕ್ಕೆ ತೊಂದರೆ ಉಂಟುಮಾಡುತ್ತಿದೆ. ಮಳೆಗಾಲದಲ್ಲಂತೂ ಈ ರಸ್ತೆಯ ಪರಿಸ್ಥಿತಿ ಕೇಳುವ ಹಾಗೆ ಇಲ್ಲ. ರಸ್ತೆಯಲ್ಲಿ ಬಿದ್ದ ಗುಂಡಿಗಳಲ್ಲಿ ನೀರು ತುಂಬಿ ರಸ್ತೆ ಕೆರೆಯಂತಾಗುತ್ತದೆ. ಆದರೆ ಈ ಬಗ್ಗೆ ಯಾರೂ ಗಮನ ಹರಿಸದೆ ಮಾರತ್‌ಹಳ್ಳಿಯಿಂದ ಎಚ್‌ಎಎಲ್‌ ಕಡೆಗೆ ತೆರಳುವ ಉತ್ತಮವಾಗಿರುವ ರಸ್ತೆ ಮೇಲೆ ಮತ್ತೆ ಡಾಂಬರೀಕರಣ ಮಾಡಿದ್ದಾರೆ. ಇದು ಯಾಕೆ ಎನ್ನುವುದು ಅರ್ಥವಾಗುತ್ತಿಲ್ಲ. ಇನ್ನಾದರೂ ಸರಿ ಇರುವುದನ್ನು ಮತ್ತೆ ರಿಪೇರಿ ಮಾಡುವ ಬದಲು, ಕೆಟ್ಟಿರುವ ರಸ್ತೆಯನ್ನು ದುರಸ್ತಿಗೊಳಿಸಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.