ADVERTISEMENT

ವಿರೋಧ ಸಲ್ಲದು

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2016, 19:30 IST
Last Updated 24 ಅಕ್ಟೋಬರ್ 2016, 19:30 IST

ತಲಾಖ್ ವಿಷಯದಲ್ಲಿ ಯಥಾಸ್ಥಿತಿ ಕಾಪಾಡಬೇಕೆಂದು ಆಗ್ರಹಿಸಿ ಅಂಜುಮನ್– ಎ–  ಇಸ್ಲಾಂ ಸಂಸ್ಥೆಯ ನೇತೃತ್ವದಲ್ಲಿ ಮುಸ್ಲಿಂ ಮಹಿಳೆಯರು ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಮೆರವಣಿಗೆ ನಡೆಸಿರುವುದು ಉತ್ತಮ ಬೆಳವಣಿಗೆಯಲ್ಲ. ಅಂಜುಮನ್ ಸಂಸ್ಥೆಗೆ ಮುಸ್ಲಿಂ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡಬೇಕಾದ ಜವಾಬ್ದಾರಿ ಇದೆ.

ತಲಾಖ್‌ ಪದ್ಧತಿಯಿಂದ ಮಹಿಳೆಯರು  ಯಾತನೆ ಅನುಭವಿಸುತ್ತಿರುವುದಕ್ಕೆ ಅನೇಕ ಉದಾಹರಣೆಗಳು ಸಿಗುತ್ತವೆ. ಮುಸ್ಲಿಂ ಸಮುದಾಯ ಇದರಿಂದ  ಹೊರಬರಬೇಕಾಗಿದೆ.
-ಶಿ.ಗು.ಹಿರೇಮಠ, ಕೂಡಲಸಂಗಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.