ADVERTISEMENT

ಸ್ವಸ್ಥ ಸಮಾಜಕ್ಕೆ ಮಾರಕ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2017, 19:30 IST
Last Updated 15 ಮಾರ್ಚ್ 2017, 19:30 IST

ನಿಷೇಧಿತ ‘ಢುಂಢಿ’ ಕೃತಿಯ ಲೇಖಕ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಕೆಲ ಕಿಡಿಗೇಡಿಗಳು ಮಸಿ ಬಳಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದು ಖಂಡನೀಯ. ಇದು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯಹರಣ ಮಾತ್ರವಲ್ಲ, ಮಾನಸಿಕ ಅಸ್ಥಿರತೆಗೆ ಕಾರಣವಾಗ ಬಹುದಾದ ಸಂಗತಿ.

ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಇಂತಹ ಕೃತ್ಯ ಗಳು  ಮಾರಕ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಚ್ಚರಿಕೆಯ ಸಂದೇಶ ರವಾನಿಸಬೇಕು.
-ರಾಧಾ ತೇಜಸ್ವಿ, ಮಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.