ADVERTISEMENT

ಪುಂಡಾಟಿಕೆಗೆ ಪ್ರೇರಣೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2018, 19:30 IST
Last Updated 22 ಜನವರಿ 2018, 19:30 IST

ಪ್ರಕಾಶ್ ರೈ ಇತ್ತೀಚೆಗೆ ಶಿರಸಿಯ ರಾಘವೇಂದ್ರ ಮಠದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ, ದೇಶದಲ್ಲಿ ಈಗ ಅಸಮಾನತೆ ಹೆಚ್ಚುತ್ತಿರುವ ಕುರಿತು ಹಾಗೂ ಸೌಹಾರ್ದವನ್ನು ಹಾಳುಗೆಡವುತ್ತಿರುವ ಸಮೂಹಗಳ ಬಗ್ಗೆ ಆತಂಕ ವ್ಯಕ್ತಪಡಿಸಿರುವುದು ಸಕಾಲಿಕ.

ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರ ಅಪ್ರಬುದ್ಧ ಹೇಳಿಕೆಗಳು, ಪುಂಡಾಟಿಕೆ ನಡೆಸುವವರಿಗೆ ಪ್ರೇರಣೆಯಾಗುತ್ತಿವೆ ಎಂಬುದರಲ್ಲಿ ಎರಡು ಮಾತಿಲ್ಲ. ದೇವರು, ಧರ್ಮ, ಮತಗಳ ಹೆಸರಿನಲ್ಲಿ ಕಂದಕಗಳನ್ನು ಸೃಷ್ಟಿಸುವುದು ನಮ್ಮ ಸಂವಿಧಾನಕ್ಕೆ ಬಗೆಯುವ ದ್ರೋಹ.

– ಬಿ. ಲಕ್ಕಣ್ಣ, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.