ADVERTISEMENT

ಇಂದು ಜನಸ್ಪಂದನ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2017, 19:49 IST
Last Updated 17 ಮಾರ್ಚ್ 2017, 19:49 IST
ಇಂದು ಜನಸ್ಪಂದನ
ಇಂದು ಜನಸ್ಪಂದನ   

ಬೆಂಗಳೂರು: ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಜಯನಗರದ ನ್ಯಾಷನಲ್‌ ಕಾಲೇಜಿನ ಡಾ.ಎಚ್‌.ಎನ್‌. ಕಲಾಕ್ಷೇತ್ರದಲ್ಲಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.

ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್‌.ಅಶೋಕ, ಕ್ಷೇತ್ರದ ವಿವಿಧ  ವಾರ್ಡ್‌ಗಳ ಪಾಲಿಕೆ ಸದಸ್ಯರು, ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ, ಪೊಲೀಸ್‌ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರು ತಮ್ಮ ವಾರ್ಡ್‌ಗಳ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಸ ವಿಲೇವಾರಿ ಸಮಸ್ಯೆ, ರಸ್ತೆ ಸುರಕ್ಷತೆ, ಉದ್ಯಾನಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ತನ್ಮೂಲಕ ವಾರ್ಡ್‌ನ ಅಭಿವೃದ್ಧಿಯಲ್ಲಿ ಕೈಜೋಡಿಸಬಹುದು.

ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಬೆಳಿಗ್ಗೆ 10ರಿಂದ ಪ್ರಶ್ನೆ ಕೇಳಲು ಅವಕಾಶ ಕಲ್ಪಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.