ನವದೆಹಲಿ: ಒಟ್ಟು 18 ವರ್ಷ ಕ್ರಿಕೆಟ್ ಆಡಳಿತದಲ್ಲಿ ಇರಲು ಸುಪ್ರೀಂ ಕೋರ್ಟ್ ಅವಕಾಶ ನೀಡಿರುವ ಕಾರಣ ಬಿಸಿಸಿಐ ಜಂಟಿ ಕಾರ್ಯದರ್ಶಿಯಾಗಿದ್ದ ಅಮಿತಾಭ್ ಚೌಧರಿ ಮತ್ತು ಖಜಾಂಚಿ ಯಾಗಿದ್ದ ಅನಿರುದ್ಧ ಚೌಧರಿ ಅವರು ಮತ್ತೆ ಅಧಿಕಾರಕ್ಕೆ ಮರಳುವ ಸಾಧ್ಯತೆಯಿದೆ.
ಕ್ರಿಕೆಟ್ ಅಭಿವೃದ್ಧಿ ಅಧಿಕಾರಿಯಾಗಿದ್ದ ರತ್ನಾಕರ ಶೆಟ್ಟಿ ಮತ್ತು ಕ್ರಿಕೆಟ್ ಆಪರೇಷನ್ಸ್ ಅಧಿಕಾರಿ ಎಂ.ವಿ. ಶ್ರೀಧರ್ ಅವರಿಗೂ ಅಧಿಕಾರಕ್ಕೆ ಬರಲು ಹಾದಿ ಸುಗಮವಾಗಿದೆ. ಲೋಧಾ ಸಮಿತಿಯ ಶಿಫಾರಸುಗಳ ಪ್ರಕಾರ ಇವರು ಹೋದ ತಿಂಗಳು ಅಧಿಕಾರದಿಂದ ಕೆಳಗಿಳಿದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.