ಪರ್ತ್: ವಿಶ್ವಕಪ್ ಕ್ರಿಕೆಟ್ ಟೂರ್ನಿಯ ವೆಸ್ಟ್ ಇಂಡೀಸ್– ಭಾರತದ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಆಯ್ದುಕೊಂಡಿದೆ.
ಶುಕ್ರವಾರದ ಪಂದ್ಯದಲ್ಲಿ ಭಾರತ ತಂಡ ಸತತ ನಾಲ್ಕನೇ ಗೆಲುವಿನ ಗುರಿ ಬೆನ್ನತ್ತಿದ್ದು ಎಲ್ಲರ ಚಿತ್ತ ಈಗ ವಾಕಾ ಕ್ರೀಡಾಂಗಣದತ್ತ ನೆಟ್ಟಿದೆ.
ಈ ಪಂದ್ಯದಲ್ಲಿ ಭಾರತ ತಂಡ ವಿಂಡೀಸ್ ಆಟಗಾರನ್ನು ಬಗ್ಗುಬಡಿಯಲೆಂದು ಭಾರತದ ಕ್ರಿಕೆಟ್ ಅಭಿಮಾನಿಗಳು ದೇಶದ ವಿವಿಧೆಡೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.