ಹೈದರಾಬಾದ್: ಐಪಿಎಲ್ ಹತ್ತನೇ ಆವೃತ್ತಿಯ 21ನೇ ಪಂದ್ಯದಲ್ಲಿ ಡೇವಿಡ್ ವಾರ್ನರ್ ಪಡೆ ಬಲಿಷ್ಠ ಡೆಲ್ಲಿ ಡೇರ್ಡೆವಿಲ್ಸ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ತವರಿನಲ್ಲಿ ಸೋಮವಾರ ನಡೆದಿದ್ದ ಪಂದ್ಯದಲ್ಲಿ ರೋಚಕ ಗೆಲುವು ಗಳಿಸಿ ಕಳೆದುಕೊಂಡಿದ್ದ ವಿಶ್ವಾಸವನ್ನು ಮರಳಿ ಪಡೆದಿರುವ ಹಾಲಿ ಚಾಂಪಿಯನ್ ಸನ್ರೈಸರ್ಸ್ ಹೈದರಾಬಾದ್ ತಂಡ ಈಗ ಮತ್ತೊಂದು ಸವಾಲಿಗೆ ಸಜ್ಜಾಗಿದೆ.
ನಾಯಕ ವಾರ್ನರ್ ಬ್ಯಾಟಿಂಗ್ನಲ್ಲಿ ಮಿಂಚಿದರೆ, ವೇಗಿ ಭುವನೇಶ್ವರ್ ಕುಮಾರ್ ಐದು ವಿಕೆಟ್ ಉರುಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.
ಆಸ್ಟ್ರೇಲಿಯಾದ ಎಡಗೈ ಬ್ಯಾಟ್ಸ್ಮನ್ ವಾರ್ನರ್ ಅವರು ಈ ಬಾರಿಯ ಟೂರ್ನಿಯಲ್ಲಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿದ್ದಾರೆ.
ಭುವನೇಶ್ವರ್ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೊದಲ ಸ್ಥಾನ ಹೊಂದಿದ್ದಾರೆ. ಅವರ ಖಾತೆಯಲ್ಲಿ 15 ವಿಕೆಟ್ಗಳಿವೆ.
ಈ ಬಾರಿಯ ಟೂರ್ನಿಯಲ್ಲಿ ಶತಕ ಗಳಿಸಿದ ಮೊದಲ ಆಟಗಾರ ಎಂಬ ಹಿರಿಮೆ ಹೊಂದಿರುವ ಡೆಲ್ಲಿ ಡೇರ್ಡೆವಿಲ್ಸ್ ತಂಡದ ಆಟಗಾರ ಸಂಜು ಸ್ಯಾಮ್ಸನ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್ ತಂಡಕ್ಕೆ ಅಬ್ಬರದ ಆರಂಭ ನೀಡಬಲ್ಲರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.