ಕರಾಚಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಭಾರತದ ಎದುರು ಜಯ ಸಾಧಸಿ ಮೊದಲ ಬಾರಿಗೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ಪಾಕಿಸ್ತಾನ ತಂಡಕ್ಕೆ ಶುಭಕೋರಿರುವ ಪಾಕ್ ತಂಡದ ಮಾಜಿ ನಾಯಕ ಶಾಹೀದ್ ಅಫ್ರೀದಿ ಸ್ಥಿರತೆ ಕಾಯ್ದುಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಭಾನುವಾರ ಲಂಡನ್ನ ಓವೆಲ್ಸ್ ಕ್ರಿಂಡಾಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಪಾಕ್ ಭಾರತದ ವಿರುದ್ಧ ಗೆಲುವು ಸಾಧಿಸಿತ್ತು.
ಪಾಕ್ ತಂಡ ಪ್ರಶಸ್ತಿ ಜಯಿಸುವ ಮೂಲಕ ಉತ್ತಮ ಸಾಧನೆ ಮಾಡಿದೆ. ಗೆಲುವು ಕೇವಲ ಒಂದು ಪ್ರಶಸ್ತಿಗೆ ಸೀಮಿತವಾಗಬಾರದು. ಯಶಸ್ಸಿನ ಓಟವನ್ನು ಮುಂದಿನ ದಿನಗಳಲ್ಲೂ ಹೀಗೆಯೇ ಮುಂದುವರಿಸಬೇಕು' ಎಂದು ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.