ADVERTISEMENT

ನನ್ನ ಸರದಿಗಾಗಿ ಕಾಯುತ್ತಿದ್ದೇನೆ: ಮನೀಷ್‌ ಪಾಂಡೆ

ಪಿಟಿಐ
Published 19 ಆಗಸ್ಟ್ 2017, 8:47 IST
Last Updated 19 ಆಗಸ್ಟ್ 2017, 8:47 IST
ಮನೀಷ್ ಪಾಂಡೆ
ಮನೀಷ್ ಪಾಂಡೆ   

ದಂಬುಲಾ: ‘ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆ.ಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ ಎಂದು ಭಾರತ ತಂಡದ ವ್ಯವಸ್ಥಾಪಕ ಮಂಡಳಿ ಘೋಷಿಸಿದೆ. ಅದರಿಂದ ನನಗೆ ಅವಕಾಶ ಸಿಗುವುದು ವಿಳಂಬವಾದರೂ ಪರವಾಗಿಲ್ಲ. ತಾಳ್ಮೆಯಿಂದ ಕಾಯುತ್ತೇನೆ’ ಎಂದು ಕರ್ನಾಟಕದವರೇ ಆದ ಬ್ಯಾಟ್ಸ್‌ಮನ್‌ ಮನೀಷ್ ಪಾಂಡೆ ಹೇಳಿದ್ದಾರೆ.

ಮನೀಷ್ ಪಾಂಡೆ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿದ್ದಾರೆ. ಶ್ರೀಲಂಕಾ ಎದುರಿನ ಸರಣಿಗೆ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

‘ರಾಹುಲ್ ಅವರು ಟೆಸ್ಟ್‌ನಲ್ಲಿ ಉತ್ತಮವಾಗಿ ಆಡಿದ್ದಾರೆ. ಅವರು ನಾಲ್ಕನೇ ಕ್ರಮಾಂಕದಲ್ಲಿ ಆಡುವುದು ಸಂತೋಷದ ಸಂಗತಿ. ಏಕದಿನ ಪಂದ್ಯಗಳಲ್ಲಿ ರಾಹುಲ್ ಮಿಂಚುವ ವಿಶ್ವಾಸವಿದೆ. ಮೊದಲು ನನಗೆ ಸಿಕ್ಕಿರುವ ಕ್ರಮಾಂಕದಲ್ಲಿ ಜವಾಬ್ದಾರಿಯಿಂದ ಆಡುತ್ತೇನೆ’ ಎಂದು ಮನೀಷ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.