ರಾಂಚಿ: ಈ ಬಾರಿಯಾದರೂ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲಲಿ ಎಂಬ ಅಭಿಮಾನಿಗಳ ಹಾರೈಕೆಗೆ ಕೊನೆಗೂ ಫಲ ಸಿಗಲಿಲ್ಲ.
ಆಟದ ಎಲ್ಲಾ ವಿಭಾಗಗಳಲ್ಲಿಯೂ ಪ್ರಭುತ್ವ ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೂರು ವಿಕೆಟ್ಗಳ ರೋಚಕ ಗೆಲುವು ದಾಖಲಿಸಿ ವಿರಾಟ್ ಕೊಹ್ಲಿ ಬಳಗದ ಫೈನಲ್ ಕನಸನ್ನು ಭಗ್ನಗೊಳಿಸಿತು.
ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 8 ವಿಕೆಟ್ಗೆ 139ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಸೂಪರ್ ಕಿಂಗ್ಸ್ ಒಂದು ಎಸೆತ ಬಾಕಿ ಇರುವಂತೆ 7 ವಿಕೆಟ್ ಕಳೆದುಕೊಂಡು ಗುರಿ ಸೇರಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.