ಲಖನೌ: ಹಿರಿಯ ಕ್ರೀಡಾ ಆಡಳಿತಗಾರ ಹಿಮಾಂತ ಬಿಸ್ವಾ ಶರ್ಮಾ ಅವರು ಭಾರತ ಬ್ಯಾಡ್ಮಿಂಟನ್ ಸಂಸ್ಥೆಯ (ಬಿಎಐ) ಹಂಗಾಮಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಭಾನುವಾರ ನಡೆದ ಕಾರ್ಯಕಾರಿ ಸಮಿತಿಯ ಸಭೆಯ ವೇಳೆ ಹಿಮಾಂತ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲು ಸರ್ವಾನುಮತದಿಂದ ಒಪ್ಪಲಾಯಿತು.
ಅಖಿಲೇಶ್ ದಾಸ್ ಗುಪ್ತಾ ಅವರ ನಿಧನದಿಂದಾಗಿ ಅಧ್ಯಕ್ಷ ಹುದ್ದೆ ತೆರವಾಗಿತ್ತು. ಅಸ್ಸಾಂ ಬ್ಯಾಡ್ಮಿಂಟನ್ ಸಂಸ್ಥೆಯ ಅಧ್ಯಕ್ಷರಾಗಿರುವ ಹಿಮಾಂತ 2018ರ ವರೆಗೂ ಅಧ್ಯಕ್ಷರಾಗಿರಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.