ಮೆಲ್ಬರ್ನ್ (ಪಿಟಿಐ): ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದರೆ ಆಸ್ಟ್ರೇಲಿಯಾಕ್ಕೆ ಅದು ಅತ್ಯಂತ ಶ್ರೇಷ್ಠ ಸಾಧನೆಯಾಗಲಿದೆ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಅಲನ್ ಬಾರ್ಡರ್ ಹೇಳಿದ್ದಾರೆ.
ಶನಿವಾರ ಧರ್ಮಶಾಲಾದಲ್ಲಿ ಆರಂಭವಾಗಲಿರುವ ಟೆಸ್ಟ್ ಪಂದ್ಯವು ಸರಣಿ ಗೆಲ್ಲಲು ನಿರ್ಣಾಯಕ ಪಂದ್ಯವಾಗಲಿದೆ. 1–1ರಿಂದ ಸರಣಿಯಲ್ಲಿ ಸಮಬಲ ಸಾಧಿಸಿರುವ ಉಭಯ ತಂಡಗಳು ಈ ಪಂದ್ಯ ಗೆಲ್ಲಲು ತುರುಸಿನ ಹಣಾಹಣಿ ನಡೆಸುವ ನಿರೀಕ್ಷೆ ಇದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ನಾವು ಸರಣಿ ಗೆದ್ದಿಲ್ಲ. ಅಲ್ಲದೇ ಅತ್ಯಂತ ಕಠಿಣ ಸವಾಲು ಗಳ ನಡುವೆ ಎದುರು ಜಯಿಸುವುದು ದೊಡ್ಡ ಸಾಧನೆ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.