ಹೈದರಾಬಾದ್: ಸಿಂಗಪುರ ಓಪನ್ ಮತ್ತು ಥಾಯ್ಲೆಂಡ್ ಓಪನ್ ಸರಣಿಗಳ ಪ್ರಶಸ್ತಿ ವಿಜೇತ ಯುವ ಬ್ಯಾಡ್ಮಿಂಟನ್ ಆಟಗಾರ ಬಿ.ಸಾಯ್ ಪ್ರಣೀತ್ ಈಗ ಮಹತ್ವದ ಪಂದ್ಯಗಳಿಗೆ ಸಜ್ಜಾಗುತ್ತಿದ್ದಾರೆ. ಈ ವಿಷಯವನ್ನು ಪ್ರಣೀತ್ ಅವರೇ ಬಹಿರಂಗ ಮಾಡಿದ್ದಾರೆ.
ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು ‘ಫಿಟ್ನೆಸ್ ಕಡೆಗೆ ಹೆಚ್ಚು ಗಮನ ನೀಡುತ್ತಿದ್ದೇನೆ, ಇದರಲ್ಲಿ ಯಶಸ್ಸು ಕಂಡರೆ ಮಹತ್ವದ ಟೂರ್ನಿಗಳಲ್ಲಿ ಜಯ ಖಚಿತ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.