ಬೆಂಗಳೂರು: ಮ್ಯಾಂಚೆಸ್ಟರ್ನಲ್ಲಿ ಈಚೆಗೆ ನಡೆದಿದ್ದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರಿಗೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಶ್ರದ್ಧಾಂಜಲಿ ಅರ್ಪಿಸಿದರು.
ಜೂನ್ 1ರಿಂದ ಆರಂಭವಾಗ ಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡಲಿರುವ ವಿರಾಟ್ ನಾಯಕತ್ವದ ಭಾರತ ತಂಡವು ಗುರುವಾರ ಲಂಡನ್ ತಲುಪಿತು. ಈ ಸಂದರ್ಭದಲ್ಲಿ ವಿರಾಟ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಇಂಗ್ಲೆಂಡ್ನಲ್ಲಿ ಇಂತಹ ದುಷ್ಕೃತ್ಯಗಳ ಸಂಖ್ಯೆ ಕಡಿಮೆ. ಆದ್ದರಿಂದ ಇಲ್ಲಿಯ ಜನರಿಗೆ ಇಂತಹ ಕೃತ್ಯಗಳು ಆಘಾತ ತಂದಿರುವುದು ಸಹಜ. ಅವರ ಬಗ್ಗೆ ನಮಗೆ ಸಹಾನುಭೂತಿ ಇದೆ’ ಎಂದರು.
‘ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವತ್ತ ನಮ್ಮ ಗುರಿ ಇದೆ. ಉತ್ತಮವಾಗಿ ಆಡಿ ಗೆಲುವು ಸಾಧಿಸುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.