ಬೆಂಗಳೂರು: ಕರ್ನಾಟಕದ ಅರ್ಚನಾ ಕಾಮತ್ ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ನಡೆದ 79ನೇ ರಾಷ್ಟ್ರೀಯ ಜೂನಿಯರ್ ಮತ್ತು ಯೂತ್ ನ್ಯಾಷನಲ್ ಅಂತರ ರಾಜ್ಯ ಟೇಬಲ್ ಟೆನಿಸ್ ಚಾಂಪಿಯನ್ಷಿಪ್ನಲ್ಲಿ ಎರಡು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
17 ವರ್ಷದ ಅರ್ಚನಾ ಇಲ್ಲಿ ಪೆಟ್ರೋಲಿಯಂ ಸ್ಪೋರ್ಟ್ಸ್ ಪ್ರಮೋಷನ್ ಬೋರ್ಡ್ (ಪಿಎಸ್ಪಿಬಿ) ತಂಡವನ್ನು ಪ್ರತಿನಿಧಿಸಿದ್ದರು. ಜೂನಿಯರ್ ಬಾಲಕಿಯರು ಹಾಗೂ ಯೂತ್ ಬಾಲಕಿಯರ ವಿಭಾಗಗಳಲ್ಲಿ ಚಿನ್ನ ಗೆಲ್ಲುವ ಮೂಲಕ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
18 ವರ್ಷದೊಳಗಿನವರ ಜೂನಿಯರ್ ಬಾಲಕಿಯರ ವಿಭಾಗದ ಫೈನಲ್ನಲ್ಲಿ ಅರ್ಚನಾ 4–3ರಲ್ಲಿ ಪಶ್ಚಿಮ ಬಂಗಾಳದ ಸುರಭಿ ಪತ್ವಾರಿ ಅವರನ್ನು ಮಣಿಸಿದರು. ಹೋದ ವರ್ಷ ವಡೋದರಾದಲ್ಲಿ ನಡೆದ ಟೂರ್ನಿಯಲ್ಲಿಯೂ ಅರ್ಚನಾ ಈ ವಿಭಾಗದಲ್ಲಿ ಚಾಂಪಿಯನ್ ಆಗಿದ್ದರು.
21 ವರ್ಷದೊಳಗಿನವರ ಯೂತ್ ಬಾಲಕಿಯರ ವಿಭಾಗದಲ್ಲಿ ಅರ್ಚನಾ 4–1ರಲ್ಲಿ ಪಶ್ಚಿಮ ಬಂಗಾಳದ ಹಾಲಿ ಚಾಂಪಿಯನ್ ಮೌಮಿತಾ ದತ್ತಾ ಎದುರು ಗೆದ್ದರು.
ಯೂತ್ ಬಾಲಕಿಯರ ವಿಭಾಗದಲ್ಲಿ ಅರ್ಚನಾ ಗೆದ್ದ ಮೊದಲ ಪ್ರಶಸ್ತಿ ಇದಾಗಿದೆ. ಎರಡೂ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಅಪರೂಪದ ಸಾಧನೆಯನ್ನು ಅವರು ಮಾಡಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.