ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ 125ನೇ ಜಯಂತಿ: ವರ್ಷಪೂರ್ತಿ ಕಾರ್ಯಕ್ರಮ

Last Updated 9 ಅಕ್ಟೋಬರ್ 2015, 20:06 IST
ಅಕ್ಷರ ಗಾತ್ರ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 125ನೇ ಜಯಂತಿಯ ಅಂಗವಾಗಿ ವರ್ಷಪೂರ್ತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕಕ್ಕೆ ಸೂಚಿಸಿದರು.

ಅಂಬೇಡ್ಕರ್‌ ಅವರ 125ನೇ ಜಯಂತಿ ಆಚರಣೆ ಕುರಿತು ಕುಮಾರಕೃಪಾ ಅತಿಥಿಗೃಹದಲ್ಲಿ ಶುಕ್ರವಾರ ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಪ್ರಮುಖರ ಜತೆ ಸಮಾಲೋಚನೆ ನಡೆಸಿದರು.

‘ಅಂಬೇಡ್ಕರ್‌ ಅವರ ಕೊಡುಗೆಗಳನ್ನು ಸ್ಮರಿಸುವ ಸಲುವಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರ, ತಾಲ್ಲೂಕು ಮಟ್ಟ, ಜಿಲ್ಲಾಮಟ್ಟ ಹಾಗೂ ರಾಜ್ಯಮಟ್ಟದಲ್ಲಿ ಪ್ರತ್ಯೇಕ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ರಾಹುಲ್‌ ಸಲಹೆ ನೀಡಿದರು’ ಎಂದು ಸಭೆಯಲ್ಲಿ ಪಾಲ್ಗೊಂಡ ನಾಯಕರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಎಐಸಿಸಿ ಪರಿಶಿಷ್ಟ ಜಾತಿ ಘಟಕದ ರಾಷ್ಟ್ರೀಯ ಸಂಚಾಲಕ ರಾಜು, ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಎನ್. ಮಂಜುನಾಥ್‌, ಶಾಸಕರಾದ ಪ್ರಿಯಾಂಕ ಖರ್ಗೆ, ಪಿ.ಎಂ.ನರೇಂದ್ರಸ್ವಾಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್‌.ಹನುಮಂತಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT