<p><strong>ಬಾಗಲಕೋಟೆ: </strong>ವಿಶ್ವಗುರು ಬಸವಣ್ಣನ ಕರ್ಮಭೂಮಿ ಕೂಡಲಸಂಗಮವನ್ನು ನವದೆಹಲಿಯ ಅಕ್ಷರಧಾಮ ಮಾದರಿಯಲ್ಲಿ ಅಭಿವೃದ್ಧಿ ಪಡಿಸಿ, ಪ್ರವಾಸಿಗರನ್ನು ಸೆಳೆಯಲು ರಾಜ್ಯ ಸರ್ಕಾರ ಮುಂದಾಗಿದೆ.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್ನಲ್ಲಿ, ಕೂಡಲಸಂಗಮವನ್ನು ಅಕ್ಷರಧಾಮ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ಶಿವಯೋಗಿ ಕಳಸದ ಅವರನ್ನು ಯೋಜನೆ ಅನುಷ್ಠಾನಕ್ಕಾಗಿ ವಿಶೇಷ ಅಧಿಕಾರಿಯನ್ನಾಗಿ ಸರ್ಕಾರ ನಿಯೋಜಿಸಿದೆ.<br /> <br /> 12ನೇ ಶತಮಾನದಲ್ಲಿ ಸಾಮಾಜಿಕ ಸುಧಾರಣೆಗಾಗಿ ಶ್ರಮಿಸಿದ ಬಸವಾದಿ ಶರಣರ ತತ್ವ, ವಿಚಾರಧಾರೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಉದ್ದೇಶವನ್ನು ಯೋಜನೆ ಒಳಗೊಂಡಿದೆ. ಪ್ರಸ್ತುತ ಯೋಜನೆ ನಿರೀಕ್ಷೆಯಂತೆ ಆರಂಭವಾದರೆ ಇನ್ನೆರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.<br /> <br /> ಈ ಕುರಿತು ‘<em><strong>ಪ್ರಜಾವಾಣಿ’</strong></em>ಗೆ ಸೋಮವಾರ ಮಾಹಿತಿ ನೀಡಿದ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಅಧಿಕಾರಿ ಡಾ.ಶಿವಯೋಗಿ ಕಳಸದ, ‘ಅಕ್ಷರಧಾಮ ಮಾದರಿ ಯೋಜನೆಯಡಿ ಬಸವಣ್ಣನ ಕಾರ್ಯಕ್ಷೇತ್ರಗಳಾದ ಕೂಡಲಸಂಗಮ, ಚಿಕ್ಕಸಂಗಮ, ಬಸವನ ಬಾಗೇವಾಡಿ, ಬಸವಕಲ್ಯಾಣ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿರುವ ಮಂಗಳವೇಡೆಯನ್ನು ಅಭಿವೃದ್ಧಿ ಪಡಿಸುವ ಉದ್ದೇಶವಿದೆ’ ಎಂದು ವಿವರಿಸಿದರು.<br /> <br /> ‘ಅಕ್ಷರಧಾಮ ಮಾದರಿಯಲ್ಲಿ ಕೂಡಲಸಂಗಮವನ್ನು ರೂಪಿಸಲು ಕನಿಷ್ಠ ₨ 100 ಕೋಟಿ ಅಗತ್ಯವಿದೆ. ಈ ಕುರಿತು ಶೀಘ್ರದಲ್ಲೇ ಅಂತಿಮ ಕ್ರಿಯಾ ಯೋಜನೆ ರೂಪಿಸಲಾಗುವುದು’ ಎಂದರು.<br /> <br /> ‘ಬಸವಣ್ಣನ ತತ್ವ ವಿಚಾರಗಳನ್ನು ಜನಸಾಮಾನ್ಯರಿಗೆ ಮನಮುಟ್ಟುವಂತೆ ಸಾಕ್ಷೀಕರಿಸಲು ಶರಣ ಗ್ರಾಮ, ಶರಣರ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಬೆಳೆಸಲು ಥೀಮ್ಪಾರ್ಕ್, ಗ್ರಂಥಾಲಯ, ಶ್ರೀಕ್ಷೇತ್ರಕ್ಕೆ ಬರುವ ಯಾತ್ರಿಕರಿಗೆ ತಂಗಲು ಅತ್ಯಾಧುನಿಕ ಯಾತ್ರಿ ನಿವಾಸ ಸೇರಿದಂತೆ ಮತ್ತಿತರರ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದರು.<br /> <br /> ‘ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ವಾಸ್ತುಶಿಲ್ಪಿ ಕೂಡಲಸಂಗಮ, ಚಿಕ್ಕಸಂಗಮ, ಬಸವನ ಬಾಗೇವಾಡಿ, ಬಸವ ಕಲ್ಯಾಣಕ್ಕೆ ಭೇಟಿ ನೀಡಿ ಯೋಜನೆಯ ರೂಪುರೇಷೆ ಹೇಗಿರಬೇಕು ಎಂಬುದರ ಬಗ್ಗೆ ಅಧ್ಯಯನ ಮಾಡಿದ್ದಾರೆ. ಅವರು ಸಲ್ಲಿಸುವ ಅಧ್ಯಯನ ವರದಿ ಆಧರಿಸಿ ಮುಂದಿನ ಕಾರ್ಯ ಯೋಜನೆ ಸಿದ್ಧಗೊಳ್ಳಲಿದೆ’ ಎಂದರು.<br /> <br /> ‘ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್. ಪಾಟೀಲ ಅವರು ಯೋಜನೆ ಅನುಷ್ಠಾನದ ಬಗ್ಗೆ ಈಗಾಗಲೇ ಎರಡು ಬಾರಿ ಸಭೆ ನಡೆಸಿ, ಸಲಹೆ–ಸೂಚನೆ ನೀಡಿದ್ದಾರೆ’ ಎಂದು ಡಾ.ಕಳಸದ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ವಿಶ್ವಗುರು ಬಸವಣ್ಣನ ಕರ್ಮಭೂಮಿ ಕೂಡಲಸಂಗಮವನ್ನು ನವದೆಹಲಿಯ ಅಕ್ಷರಧಾಮ ಮಾದರಿಯಲ್ಲಿ ಅಭಿವೃದ್ಧಿ ಪಡಿಸಿ, ಪ್ರವಾಸಿಗರನ್ನು ಸೆಳೆಯಲು ರಾಜ್ಯ ಸರ್ಕಾರ ಮುಂದಾಗಿದೆ.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್ನಲ್ಲಿ, ಕೂಡಲಸಂಗಮವನ್ನು ಅಕ್ಷರಧಾಮ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ಶಿವಯೋಗಿ ಕಳಸದ ಅವರನ್ನು ಯೋಜನೆ ಅನುಷ್ಠಾನಕ್ಕಾಗಿ ವಿಶೇಷ ಅಧಿಕಾರಿಯನ್ನಾಗಿ ಸರ್ಕಾರ ನಿಯೋಜಿಸಿದೆ.<br /> <br /> 12ನೇ ಶತಮಾನದಲ್ಲಿ ಸಾಮಾಜಿಕ ಸುಧಾರಣೆಗಾಗಿ ಶ್ರಮಿಸಿದ ಬಸವಾದಿ ಶರಣರ ತತ್ವ, ವಿಚಾರಧಾರೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಉದ್ದೇಶವನ್ನು ಯೋಜನೆ ಒಳಗೊಂಡಿದೆ. ಪ್ರಸ್ತುತ ಯೋಜನೆ ನಿರೀಕ್ಷೆಯಂತೆ ಆರಂಭವಾದರೆ ಇನ್ನೆರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.<br /> <br /> ಈ ಕುರಿತು ‘<em><strong>ಪ್ರಜಾವಾಣಿ’</strong></em>ಗೆ ಸೋಮವಾರ ಮಾಹಿತಿ ನೀಡಿದ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಅಧಿಕಾರಿ ಡಾ.ಶಿವಯೋಗಿ ಕಳಸದ, ‘ಅಕ್ಷರಧಾಮ ಮಾದರಿ ಯೋಜನೆಯಡಿ ಬಸವಣ್ಣನ ಕಾರ್ಯಕ್ಷೇತ್ರಗಳಾದ ಕೂಡಲಸಂಗಮ, ಚಿಕ್ಕಸಂಗಮ, ಬಸವನ ಬಾಗೇವಾಡಿ, ಬಸವಕಲ್ಯಾಣ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿರುವ ಮಂಗಳವೇಡೆಯನ್ನು ಅಭಿವೃದ್ಧಿ ಪಡಿಸುವ ಉದ್ದೇಶವಿದೆ’ ಎಂದು ವಿವರಿಸಿದರು.<br /> <br /> ‘ಅಕ್ಷರಧಾಮ ಮಾದರಿಯಲ್ಲಿ ಕೂಡಲಸಂಗಮವನ್ನು ರೂಪಿಸಲು ಕನಿಷ್ಠ ₨ 100 ಕೋಟಿ ಅಗತ್ಯವಿದೆ. ಈ ಕುರಿತು ಶೀಘ್ರದಲ್ಲೇ ಅಂತಿಮ ಕ್ರಿಯಾ ಯೋಜನೆ ರೂಪಿಸಲಾಗುವುದು’ ಎಂದರು.<br /> <br /> ‘ಬಸವಣ್ಣನ ತತ್ವ ವಿಚಾರಗಳನ್ನು ಜನಸಾಮಾನ್ಯರಿಗೆ ಮನಮುಟ್ಟುವಂತೆ ಸಾಕ್ಷೀಕರಿಸಲು ಶರಣ ಗ್ರಾಮ, ಶರಣರ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಬೆಳೆಸಲು ಥೀಮ್ಪಾರ್ಕ್, ಗ್ರಂಥಾಲಯ, ಶ್ರೀಕ್ಷೇತ್ರಕ್ಕೆ ಬರುವ ಯಾತ್ರಿಕರಿಗೆ ತಂಗಲು ಅತ್ಯಾಧುನಿಕ ಯಾತ್ರಿ ನಿವಾಸ ಸೇರಿದಂತೆ ಮತ್ತಿತರರ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದರು.<br /> <br /> ‘ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ವಾಸ್ತುಶಿಲ್ಪಿ ಕೂಡಲಸಂಗಮ, ಚಿಕ್ಕಸಂಗಮ, ಬಸವನ ಬಾಗೇವಾಡಿ, ಬಸವ ಕಲ್ಯಾಣಕ್ಕೆ ಭೇಟಿ ನೀಡಿ ಯೋಜನೆಯ ರೂಪುರೇಷೆ ಹೇಗಿರಬೇಕು ಎಂಬುದರ ಬಗ್ಗೆ ಅಧ್ಯಯನ ಮಾಡಿದ್ದಾರೆ. ಅವರು ಸಲ್ಲಿಸುವ ಅಧ್ಯಯನ ವರದಿ ಆಧರಿಸಿ ಮುಂದಿನ ಕಾರ್ಯ ಯೋಜನೆ ಸಿದ್ಧಗೊಳ್ಳಲಿದೆ’ ಎಂದರು.<br /> <br /> ‘ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್. ಪಾಟೀಲ ಅವರು ಯೋಜನೆ ಅನುಷ್ಠಾನದ ಬಗ್ಗೆ ಈಗಾಗಲೇ ಎರಡು ಬಾರಿ ಸಭೆ ನಡೆಸಿ, ಸಲಹೆ–ಸೂಚನೆ ನೀಡಿದ್ದಾರೆ’ ಎಂದು ಡಾ.ಕಳಸದ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>