ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಖಿಲೇಶ್‌ಗೆ ಸಲ್ಮಾನ್‌ ಥ್ಯಾಂಕ್ಸ್‌

ಪಂಚರಂಗಿ
Last Updated 26 ಜುಲೈ 2015, 19:30 IST
ಅಕ್ಷರ ಗಾತ್ರ

ಉತ್ತರ ಪ್ರದೇಶದ ಸರ್ಕಾರ ‘ಬಜರಂಗಿ ಭಾಯಿಜಾನ್‌’ ಚಿತ್ರಕ್ಕೆ ಯಾವುದೇ  ತೆರಿಗೆ ವಿಧಿಸಿಲ್ಲ. ಈ ಕಾರಣಕ್ಕೆ ನಟ ಸಲ್ಮಾನ್‌, ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್‌ ಅವರಿಗೆ ಧನ್ಯವಾದ ಹೇಳಿದ್ದಾರೆ.

ಚಿತ್ರದ ನಿರ್ದೇಶಕ ಕಬೀರ್‌ ಖಾನ್‌ ಕೆಲ ದಿನಗಳ ಹಿಂದೆಯಷ್ಟೆ ಅಖಿಲೇಶ್‌ ಯಾದವ್‌ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿಯ ನಂತರ ಉತ್ತರ ಪ್ರದೇಶದಲ್ಲಿ ‘ಬಜರಂಗಿ ಭಾಯಿಜಾನ್‌’ ಚಿತ್ರದ ಟಿಕೆಟ್‌ಗಳ ಮೇಲೆ ಯಾವುದೇ ತೆರಿಗೆ ವಿಧಿಸಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು  ಪಿಟಿಐ ವರದಿ ಮಾಡಿದೆ. ಅಖಿಲೇಶ್‌ ಅವರ ನಿರ್ಧಾರಕ್ಕಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸಲ್ಮಾನ್‌ ಟ್ವೀಟ್‌ ಮಾಡಿದ್ದಾರೆ.

ಈ ಚಿತ್ರದಲ್ಲಿ ಸಲ್ಮಾನ್‌ ಭಾರತದಲ್ಲಿ ಕಳೆದುಹೋಗುವ ಪಾಕಿಸ್ತಾನಿ ಹುಡುಗಿಯನ್ನು, ಆಕೆಯ ತಾಯ್ನಾಡಿಗೆ ತಲುಪಿಸುವ ಪಾತ್ರದಲ್ಲಿ ಅಭಿನಯಿಸಿದ್ದಾರೆ.           

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT