ಲಖನೌ (ಪಿಟಿಐ): ಬದಾಯೂಂನಲ್ಲಿ ಇಬ್ಬರು ದಲಿತ ಸಹೋದರಿಯರ ಮೇಲೆ ಅತ್ಯಚಾರ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಮಾಧ್ಯಮಗಳು ದೇಶದಾದ್ಯಂತ ಅತಿಯಾದ ಪ್ರಚಾರ ನೀಡಿದವು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ಬದಾಯೂಂ ಆಗಿರಲಿ, ಅಥವಾ ಬೇರೆ ಪ್ರಕರಣಗಳಾಗಿರಲಿ. ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ಅಖಿಲೇಶ್ ಹೇಳಿದ್ದಾರೆ.
‘ಇಂತಹ ಘಟನೆಗಳು ಉತ್ತರ ಪ್ರದೇಶದಲ್ಲಿ ಮಾತ್ರ ನಡೆಯುವುದಲ್ಲ ಎಂಬುದನ್ನು ನಾನು ಹಲವು ಬಾರಿ ಹೇಳಿದ್ದೇನೆ. ಆದರೆ ರಾಜ್ಯದಲ್ಲಿ ನಡೆಯುವ ಪ್ರಕರಣಗಳಿಗೆ ಹೆಚ್ಚಿನ ಪ್ರಚಾರ ದೊರಕುತ್ತದೆ’ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.
ಬೆಂಗಳೂರಿನಲ್ಲಿ ನಡೆದ ಇಂತಹ ಘಟನೆಯನ್ನು ರಾಷ್ಟ್ರೀಯ ಸುದ್ದಿವಾಹಿನಿಗಳು ಪ್ರಸಾರ ಮಾಡಿವೆಯೇ ಎಂದು ಅಖಿಲೇಶ್ ಪ್ರಶ್ನಿಸಿದರು.
ರಾಜಸ್ತಾನ, ಮಧ್ಯಪ್ರದೇಶಗಳಲ್ಲಿಯೂ ಇಂತಹ ಘಟನೆಗಳು ನಡೆಯುತ್ತವೆ ಎಂದು ಅವರು
ಹೇಳಿದರು.