ಪಕ್ಷದ ಕ್ರಮಕ್ಕೆ ಅವರು ವಿಷಾದ ವ್ಯಕ್ತಪಡಿಸಿದ್ದರು. ಚುನಾವಣೆಯಲ್ಲಿ 87,461 ಮತಗಳಿಂದ ಸೋಲನ್ನೂ ಕಂಡಿದ್ದರು. ಭೇಟಿಯ ಹಿನ್ನೆಲೆಯಲ್ಲಿ ಜಸ್ವಂತ್ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ಹರಡಿದ್ದರೂ, ತಮ್ಮ ಪುತ್ರ ಮನ್ವೇಂದ್ರ ಅವರ ರಾಜಕೀಯ ಭವಿಷ್ಯದ ಬಗ್ಗೆಯೂ ಅವರು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ. ರಾಜಸ್ತಾನದ ವಿಧಾನಸಭೆಯಲ್ಲಿ ಶಾಸಕರಾಗಿರುವ ಮನ್ವೇಂದ್ರ ಅವರನ್ನು ಬಿಜೆಪಿ ಅಮಾನತು ಮಾಡಿದೆ.
ಬಾರ್ಮೇರ್ನಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಮನ್ವೇಂದ್ರ ಅವರು ಪ್ರಚಾರ ಮಾಡಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಿಂದಲೂ ತೆಗೆದುಹಾಕಲಾಗಿದೆ.