‘ನ್ಯಾಯಮಂಡಳಿಯ ಯಾವುದೇ ಆದೇಶಗಳನ್ನು ಕರ್ನಾಟಕ ಸರ್ಕಾರ ಉಲ್ಲಂಘಿಸುತ್ತಿಲ್ಲ. ನಿಯಮದ ಪ್ರಕಾರ ತಮಿಳುನಾಡಿಗೆ ನಾವು ಒಂದು ವರ್ಷಕ್ಕೆ ಸರಾಸರಿ 192 ಟಿಎಂಸಿ ಅಡಿ ನೀರನ್ನು ಕೊಡಬೇಕು. ಒಂದು ವೇಳೆ ಪ್ರವಾಹದ ಸಂದರ್ಭದಲ್ಲಿ ಹೆಚ್ಚುವರಿ ನೀರು ಲಭ್ಯವಾದರೆ ಅದನ್ನು ಬಳಸಿಕೊಳ್ಳುವ ಹಕ್ಕು ರಾಜ್ಯಕ್ಕಿದೆ’ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಇಲ್ಲಿ ತಿಳಿಸಿದ್ದಾರೆ.