ನವದೆಹಲಿ (ಪಿಟಿಐ): ಅತ್ಯಾಚಾರ ಸಂತ್ರಸ್ತೆಯರ ಪುನರ್ವಸತಿಗೆ ‘ನಿರ್ಭಯ ನಿಧಿ’ ಸ್ಥಾಪಿಸಿರುವುದು ಬಾಯಿ ಮಾತಿನ ಸಹಾನುಭೂತಿ ಮಾತ್ರ ಎಂದು ಟೀಕಿಸಿರುವ ಸುಪ್ರೀಂಕೋರ್ಟ್, ಸಂತ್ರಸ್ತೆಯರಿಗೆ ಸಾಕಷ್ಟು ಪರಿಹಾರ ಒದಗಿಸಲು ರಾಷ್ಟ್ರೀಯ ನೀತಿ ರೂಪಿಸ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಅತ್ಯಾಚಾರ ಸಂತ್ರಸ್ತೆಯರಿಗೆ ಸಂಬಂಧಿ ಸಿದಂತೆ ರಾಜ್ಯಗಳಲ್ಲಿ ಬೇರೆಬೇರೆ ನೀತಿ ಅನುಸರಿಸಲಾಗುತ್ತಿದೆ. ಆದ್ದರಿಂದ ಒಂದು ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ನ್ಯಾಯಮೂರ್ತಿಗಳಾದ ಪಿ. ಸಿ. ಪಂತ್ ಮತ್ತು ಡಿ. ವೈ. ಚಂದ್ರಚೂಡ ಅವನ್ನು ಒಳಗೊಂಡ ರಜಾ ಕಾಲದ ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಅತ್ಯಾಚಾರ ಸಂತ್ರಸ್ತೆಯರಿಗೆ ಸೂಕ್ತ ಪರಿಹಾರ ಒದಗಿಸಲು ನಿರ್ಭಯ ನಿಧಿ ಒಂದೇ ಸಾಲದು. ಆದ್ದರಿಂದ ಸರ್ಕಾರ ಸ್ಪಷ್ಟ ನೀತಿ ರೂಪಿಸಬೇಕು ಎಂದು ನ್ಯಾಯಪೀಠ ಹೇಳಿದೆ.