ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ, ಹತ್ಯೆ ಮೂವರಿಗೆ ಗಲ್ಲು ಶಿಕ್ಷೆ ಕಾಯಂ

Last Updated 26 ಆಗಸ್ಟ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ಹರಿ­ಯಾಣದಲ್ಲಿ 2012ರಲ್ಲಿ  ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದ್ದ ಮೂವರು ಆರೋಪಿಗಳಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ಕಾಯಂಗೊಳಿಸಿದೆ. 

ಮೂವರು ಆರೋಪಿಗಳು 19 ವರ್ಷದ ಯುವತಿ ಮೇಲೆ ಅತ್ಯಾ ಚಾರವೆಸಗಿ ಕೊಲೆ ಮಾಡಿದ್ದರು. ಈ ಕೃತ್ಯ ನಡೆಸಿದ್ದ 3 ಆರೋಪಿ­ಗಳಿಗೆ ವಿಚಾರಣಾ ನ್ಯಾಯಾಲಯ ಫೆಬ್ರುವರಿಯಲ್ಲಿ ಗಲ್ಲುಶಿಕ್ಷೆ ವಿಧಿಸಿತ್ತು. 

ದೆಹಲಿಯ ಕುತುಬ್ ವಿಹಾರ ಪ್ರದೇಶದಲ್ಲಿ ತನ್ನ ಸಹೋದ್ಯೋ­ಗಿಗಳ ಜತೆ ಗುಡ­ಗಾಂವ್‌­ನಿಂದ ಬರುತ್ತಿದ್ದ ಯುವತಿ ಯನ್ನು ರಾಹುಲ್‌, ರವಿ, ವಿನೋದ್‌ ಎಂಬು­ವರು ಕಾರ್‌­ನಲ್ಲಿ ಅಪಹರಿಸಿ ಅತ್ಯಾಚಾರ­ವೆಸಗಿ ಕೊಲೆಗೈದಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT