ಈ ಮೊದಲಿನಿಂದಲೂ ಗಬ್ಬೂರು ಗ್ರಾಮದ ಶ್ರೀ ಶಾಂತಮೂರ್ತಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಅದೇ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ, ಕೋತ್ತದೊಡ್ಡಿ ಗ್ರಾಮದ ವಿದ್ಯಾರ್ಥಿಗಳು ಪಕ್ಕದ ಅರಕೇರಾ ಪರೀಕ್ಷಾ ಕೇಂದ್ರ ಮತ್ತು ಬುಂಕಲದೊಡ್ಡಿ ಗ್ರಾಮದ ವಿದ್ಯಾರ್ಥಿಗಳು ಪಕ್ಕದ ಜಾಲಹಳ್ಳಿ ಪರೀಕ್ಷಾ ಕೇಂದ್ರದಲ್ಲಿಯೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದರು. ಆದರೆ, ಈ ಬಾರಿ ಸಮಸ್ಯೆ ನಿರ್ಮಾಣವಾಗಿದೆ.
‘ಯಾರೋ ಮಾಡಿದ ತಪ್ಪಿಗೆ ವಿದ್ಯಾರ್ಥಿಗಳು ಕಷ್ಟ ಎದುರಿಸಬೇಕಾಗಿದೆ. ಅದರಲ್ಲಿ ಬಾಲಕಿಯರಿಗೆ ಪರೀಕ್ಷಾ ಅವಧಿಯಲ್ಲಿ ಪ್ರತಿನಿತ್ಯ ದೂರದ ಪರೀಕ್ಷಾ ಕೇಂದ್ರಕ್ಕೆ ಹೋಗಿ ಬರುವುದು ಸಮಸ್ಯೆಯಾಗಿದೆ. ಈ ಎಲ್ಲ ಗೊಂದಲದಿಂದಾಗಿ ಕೆಲವು ಬಾಲಕಿಯರ ಪಾಲಕರು ಪರೀಕ್ಷೆ ಬರೆಯುವುದೇ ಬೇಡ ಎನ್ನುವ ಸ್ಥಿತಿಗೆ ಬಂದಿದ್ದಾರೆ’ ಎಂದು ಪಾಲಕರೊಬ್ಬರು ಹೇಳಿದರು.
‘ಪರೀಕ್ಷಾ ಕೇಂದ್ರ ಬದಲಾದ ಬಗ್ಗೆ ಇಲಾಖೆಯ ನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ಪಾಲಕರೇ ಪರೀಕ್ಷಾ ಕೇಂದ್ರಕ್ಕೆ ತಮ್ಮ ಮಕ್ಕಳನ್ನು ಕರೆದೊಯ್ಯಬೇಕು’ ಎಂದು ಕೋತ್ತದೊಡ್ಡಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕಿ ವೆಂಕಟಮ್ಮ ಪ್ರತಿಕ್ರಿಯಿಸಿದರು.
*ರಾಜ್ಯ ಪರೀಕ್ಷಾ ಮಂಡಳಿಯಲ್ಲಿ ಆದ ತಪ್ಪಿನಿಂದಾಗಿ ಪರೀಕ್ಷಾ ಕೇಂದ್ರಗಳು ಬದಲಾಗಿವೆ. ಶಾಲಾ ಮುಖ್ಯಸ್ಥರೇ ಈ ಮಕ್ಕಳಿಗೆ ಪರೀಕ್ಷಾ ಕೇಂದ್ರಗಳಿಗೆ ಕಳಿಸುವ ವ್ಯವಸ್ಥೆ ಕಲ್ಪಿಸಬೇಕು.
ಎಚ್.ಡಿ.ಹುನುಗುಂದ, ಕ್ಷೇತ್ರ ಶಿಕ್ಷಣಾಧಿಕಾರಿ ದೇವದುರ್ಗ