ಯಲಹಂಕ: ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಅನ್ನಪೂರ್ಣಮ್ಮ ವೀರಭದ್ರಯ್ಯ ಹಾಗೂ ಉಪಾಧ್ಯಕ್ಷರಾಗಿ ಗುರುಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕಾಗಿ ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಮತ್ತು ಜೆಡಿ(ಎಸ್) ಬೆಂಬಲಿತ ಅಭ್ಯರ್ಥಿಗಳಾಗಿ ರಾಜಾನುಕುಂಟೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರದ ಸದಸ್ಯೆ ಅನ್ನಪೂರ್ಣಮ್ಮ ಹಾಗೂ ಬಂಡಿಕೊಡಿಗೇಹಳ್ಳಿ ತಾಲ್ಲೂಕು ಪಂಚಾಯ್ತಿ ಕ್ಷೇತ್ರದ ಸದಸ್ಯ ಗುರುಮೂರ್ತಿ ನಾಮಪತ್ರ ಸಲ್ಲಿಸಿದ್ದರು. ಬೆಂಗಳೂರು ಉತ್ತರ ವಿಭಾಗಾಧಿಕಾರಿ ಮಹೇಶ್ಬಾಬು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.