ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಪಾದಚಾರಿ ಸಾವು

Last Updated 26 ಜೂನ್ 2016, 20:02 IST
ಅಕ್ಷರ ಗಾತ್ರ

ಬೆಂಗಳೂರು: ಬಸ್‌ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಮೀಪದ ಬೆಟ್ಟಹಲಸೂರು ಬಳಿ ಶನಿವಾರ ರಾತ್ರಿ ನಡೆದಿದೆ. ಆನಂದ್‌ (33) ಮೃತಪಟ್ಟವರು. ಮೂಲತಃ ಗೌರಿಬಿದನೂರಿನ ಅವರು, ಕೂಲಿ ಕೆಲಸ ಮಾಡುತ್ತಿದ್ದರು. ಯಲಹಂಕದಲ್ಲಿರುವ ಸ್ನೇಹಿತನನ್ನು ಭೇಟಿ ಮಾಡಲು ನಗರಕ್ಕೆ ಬಂದಿದ್ದರು.

ರಾತ್ರಿ 8.30 ಸುಮಾರಿಗೆ ಬಸ್‌ ಹತ್ತಲು ಅವರು ರಸ್ತೆ ದಾಟುತ್ತಿದ್ದರು. ಈ ವೇಳೆ, ವೇಗವಾಗಿ ಬಂದ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆನಂದ್‌ ಅವರನ್ನು ದಾರಿಹೋಕರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟೊತ್ತಿಗೆ ಆನಂದ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ್ದ ಚಿಕ್ಕಜಾಲ ಸಂಚಾರ ಪೊಲೀಸರು, ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಪತ್ತೆಗೆ ಸಿ.ಸಿ.ಟಿ.ವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತು ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT