ಇರೋಡ್(ಪಿಟಿಐ): ತಮಿಳುನಾಡಿನ ಇರೋಡ್ ನಲ್ಲಿ ಸರಕು ಸಾಗಣೆ ಲಾರಿ ಮತ್ತು ಕಾರಿನ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆ. ಸರವಣನ್(37) ಮತ್ತು ಅವರ ಪತ್ನಿ ಹಾಗೂ ಏಳು ವರ್ಷದ ಪುತ್ರಿ ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ತೆರಳಿರುವ ಡಿಎಸ್ ಪಿ ರೆಗಿನಾ ಬೇಗಂ ಅವರು ಮೃತರ ದೇಹಗಳನ್ನು ವಶಕ್ಕೆ ಪಡೆದು, ಶವ ಪರೀಕ್ಷೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ.
ಸರವಣನ್ ಅವರು ಅರೆನಿದ್ರೆಯಲ್ಲಿ ವಾಹನ ಚಾಲನೆ ಮಾಡಿರುವುದೇ ಅಪಘಾತಕ್ಕೆ ಕಾರಣವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.