ಹೊಸಕೋಟೆ: ಮಾಲೂರು ರಸ್ತೆಯ ಜಡಿಗೇನಹಳ್ಳಿ ಪ್ರೌಢಶಾಲೆ ಸಮೀಪದ ತಿರುವಿನಲ್ಲಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ತಮಿಳುನಾಡು ಮೂಲದ ರಂಜಿತ್ (35) ಮೃತರು.
ಮಾಲೂರಿನ ಬೋರ್ ವೆಲ್ ಕೊರೆಯುವ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಕಾರ್ಯನಿಮಿತ್ತ ಹೊಸಕೋಟೆ ಕಡೆ ಬೈಕ್ ನಲ್ಲಿ ಬರುತ್ತಿದ್ದರು. ಆಗ ಎದುರಿನಿಂದ ವೇಗವಾಗಿ ಬಂದ ಯಾವುದೊ ವಾಹನವೊಂದು ಡಿಕ್ಕಿ ಹೊಡೆದಿದೆ.
ಬೈಕ್ ನಿಂದ ಕೆಳಕ್ಕೆ ಬಿದ್ದ ರಂಜಿತ್ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.