ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಾಯದಲ್ಲಿ ಸಂವಿಧಾನದ ತತ್ವಗಳು: ಸೋನಿಯಾ

Last Updated 26 ನವೆಂಬರ್ 2015, 11:14 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಅಸಹಿಷ್ಣುತೆ ಕುರಿತಂತೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಸಂವಿಧಾನದ ಆದರ್ಶ ಮತ್ತು ತತ್ವಗಳು ಅಪಾಯದಲ್ಲಿವೆ ಎಂದಿದ್ದಾರೆ.

ಸಂಸತ್‌ನ ಚಳಿಗಾಲದ ಅಧಿವೇಶನದ ಮೊದಲ ದಿನ ಗುರುವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಸಂವಿಧಾನ ಬದ್ಧತೆ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ‘ಇಂದು ಸಂವಿಧಾನ ಬದ್ಧತೆ ಬಗ್ಗೆ ಚರ್ಚೆ ನಡೆಯುವಂತಾಗಿದೆ. ಇದಕ್ಕಿಂತ ದೊಡ್ಡ ನಗೆಪಾಟಲಿನ ಸಂಗತಿ ಮತ್ತೊಂದಿಲ್ಲ’ ಎಂದರು.

ಸ್ವಾತಂತ್ರ್ಯ ಹೋರಾಟ ಹಾಗೂ ಸಂವಿಧಾನ ರಚನೆ ವೇಳೆ ಕಾಂಗ್ರೆಸ್ ನೀಡಿದ್ದ ಕೊಡುಗೆ ಹಾಗೂ ಅಂಬೇಡ್ಕರ್ ಅವರನ್ನು ಸ್ಮರಿಸಿದ ಸೋನಿಯಾ, ಕಳೆದ ಐದು ತಿಂಗಳಿಂದ ಸಂವಿಧಾನದ ತತ್ವಗಳಿಗೆ ವಿರುದ್ಧವಾದ ವಾತಾವರಣ ನಿರ್ಮಾಣವಾಗಿದೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT