<p><strong>ಬೆಂಗಳೂರು: </strong>‘ಒಕ್ಕಲಿಗರ ಸಂಘದ ಖಜಾಂಚಿ ಉಲ್ಲೂರು ಸಿ. ಮಂಜುನಾಥ್ ಅವರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಹಿಂದೆ ಸಂಘದ ಅಧ್ಯಕ್ಷ ಅಪ್ಪಾಜಿಗೌಡ ಅವರ ಕೈವಾಡವಿದೆ’ ಎಂದು ಆರೋಪಿಸಿ ಮಂಜುನಾಥ್ ಬೆಂಬಲಿಗರು ಒಕ್ಕಲಿಗರ ಭವನದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.<br /> <br /> ಶನಿವಾರ ಬೆಳಿಗ್ಗೆ ವಿ.ವಿ.ಪುರದ ಒಕ್ಕಲಿಗರ ಭವನದ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ‘ಯಾವುದೇ ತಪ್ಪು ಮಾಡದಿದ್ದರೂ ಮಂಜುನಾಥ್ ಅವರನ್ನು ಅವಮಾನಿಸಲಾಗಿದೆ. ಇದು ಅಪ್ಪಾಜಿಗೌಡ ಅವರದ್ದೇ ಕುತಂತ್ರ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.<br /> <br /> ಪ್ರತಿಭಟನೆಯ ಮುನ್ಸೂಚನೆ ಅರಿತಿದ್ದ ಸಂಘದ ಪದಾಧಿಕಾರಿಗಳು ಮೊದಲೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಎರಡು ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿತ್ತು.<br /> <br /> ಘೋಷಣೆ ಕೂಗುತ್ತಾ ಸಂಘದ ಕಚೇರಿಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಅಡ್ಡಗಟ್ಟಿದ್ದರಿಂದ ಕೆಲ ಕಾಲ ಮಾತಿನ ಚಕಮಕಿ ನಡೆಯಿತು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಅವರ ಮನವೊಲಿಸುವಲ್ಲಿ ಯಶಸ್ವಿಯಾದರು.<br /> <br /> ಮಗಳಿಗೆ ವೈದ್ಯಕೀಯ ಸೀಟು ಕೊಡಿಸುವುದಾಗಿ ₹ 65 ಲಕ್ಷ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ವೆಂಕಟೇಶ್ ಎಂಬಾತ ಸಹಚರರ ಜತೆ ಸೇರಿಕೊಂಡು ಜುಲೈ 20ರಂದು ಮಂಜುನಾಥ್ ಅವರಿಗೆ ಚಪ್ಪಲಿ ಹಾರ ಹಾಕಿದ್ದ. ಈ ಸಂಬಂಧ ಸೆಂಟ್ರಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವೆಂಕಟೇಶ್ ಮತ್ತು ಆತನ ಸಹಚರ ದಾಸ್ ಎಂಬಾತನನ್ನು ಬಂಧಿಸಿದ್ದರು.<br /> *<br /> <strong>‘ತನಿಖೆಗೆ ನಾನು ಸಿದ್ಧ’</strong><br /> ‘ನಾನು ₹ 50 ಸಾವಿರ ಕೊಟ್ಟು ಚಪ್ಪಲಿ ಹಾರ ಹಾಕಿಸಿದ್ದಾಗಿ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ವೆಂಕಟೇಶ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗುತ್ತಿದೆ. ಈ ಬಗ್ಗೆ ಪೊಲೀಸರು ಪಾರದರ್ಶಕ ತನಿಖೆ ನಡೆಸಲಿ. ನನ್ನ ಪಾತ್ರ ಸಾಬೀತಾದರೆ, ತಕ್ಷಣವೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಅಪ್ಪಾಜಿಗೌಡ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಒಕ್ಕಲಿಗರ ಸಂಘದ ಖಜಾಂಚಿ ಉಲ್ಲೂರು ಸಿ. ಮಂಜುನಾಥ್ ಅವರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಹಿಂದೆ ಸಂಘದ ಅಧ್ಯಕ್ಷ ಅಪ್ಪಾಜಿಗೌಡ ಅವರ ಕೈವಾಡವಿದೆ’ ಎಂದು ಆರೋಪಿಸಿ ಮಂಜುನಾಥ್ ಬೆಂಬಲಿಗರು ಒಕ್ಕಲಿಗರ ಭವನದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.<br /> <br /> ಶನಿವಾರ ಬೆಳಿಗ್ಗೆ ವಿ.ವಿ.ಪುರದ ಒಕ್ಕಲಿಗರ ಭವನದ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ‘ಯಾವುದೇ ತಪ್ಪು ಮಾಡದಿದ್ದರೂ ಮಂಜುನಾಥ್ ಅವರನ್ನು ಅವಮಾನಿಸಲಾಗಿದೆ. ಇದು ಅಪ್ಪಾಜಿಗೌಡ ಅವರದ್ದೇ ಕುತಂತ್ರ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.<br /> <br /> ಪ್ರತಿಭಟನೆಯ ಮುನ್ಸೂಚನೆ ಅರಿತಿದ್ದ ಸಂಘದ ಪದಾಧಿಕಾರಿಗಳು ಮೊದಲೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಎರಡು ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿತ್ತು.<br /> <br /> ಘೋಷಣೆ ಕೂಗುತ್ತಾ ಸಂಘದ ಕಚೇರಿಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಅಡ್ಡಗಟ್ಟಿದ್ದರಿಂದ ಕೆಲ ಕಾಲ ಮಾತಿನ ಚಕಮಕಿ ನಡೆಯಿತು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಅವರ ಮನವೊಲಿಸುವಲ್ಲಿ ಯಶಸ್ವಿಯಾದರು.<br /> <br /> ಮಗಳಿಗೆ ವೈದ್ಯಕೀಯ ಸೀಟು ಕೊಡಿಸುವುದಾಗಿ ₹ 65 ಲಕ್ಷ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ವೆಂಕಟೇಶ್ ಎಂಬಾತ ಸಹಚರರ ಜತೆ ಸೇರಿಕೊಂಡು ಜುಲೈ 20ರಂದು ಮಂಜುನಾಥ್ ಅವರಿಗೆ ಚಪ್ಪಲಿ ಹಾರ ಹಾಕಿದ್ದ. ಈ ಸಂಬಂಧ ಸೆಂಟ್ರಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವೆಂಕಟೇಶ್ ಮತ್ತು ಆತನ ಸಹಚರ ದಾಸ್ ಎಂಬಾತನನ್ನು ಬಂಧಿಸಿದ್ದರು.<br /> *<br /> <strong>‘ತನಿಖೆಗೆ ನಾನು ಸಿದ್ಧ’</strong><br /> ‘ನಾನು ₹ 50 ಸಾವಿರ ಕೊಟ್ಟು ಚಪ್ಪಲಿ ಹಾರ ಹಾಕಿಸಿದ್ದಾಗಿ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ವೆಂಕಟೇಶ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗುತ್ತಿದೆ. ಈ ಬಗ್ಗೆ ಪೊಲೀಸರು ಪಾರದರ್ಶಕ ತನಿಖೆ ನಡೆಸಲಿ. ನನ್ನ ಪಾತ್ರ ಸಾಬೀತಾದರೆ, ತಕ್ಷಣವೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಅಪ್ಪಾಜಿಗೌಡ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>