ನವದೆಹಲಿ (ಪಿಟಿಐ): ಉತ್ತರ ಪ್ರದೇಶದ ಕೋಮುಗಲಭೆಗ್ರಸ್ತ ಪ್ರದೇಶಗಳಲ್ಲಿ ಚುನಾವಣಾ ಭಾಷಣದ ವೇಳೆ ‘ಸೇಡು ತೀರಿಸಿಕೊಳ್ಳಲು’ ಕರೆ ನೀಡಿದ್ದ ನರೇಂದ್ರ ಮೋದಿ ಅವರ ಆಪ್ತ ಅಮಿತ್ ಷಾ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಶಾಮ್ಲಿ, ಬಿಜ್ನೋರ್ ಮತ್ತು ಮುಜಪ್ಫರ್ನಗರ ಜಿಲ್ಲೆಗಳಲ್ಲಿ ಮಾಡಿದ ಭಾಷಣದಲ್ಲಿ ಸೇಡು ತೀರಿಸಿಕೊಳ್ಳಲು ಕರೆ ನೀಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೇ ಕಂಡುಬಂದಿದೆ.