ಗುವಾಹಟಿ (ಪಿಟಿಐ): ಎಸ್ಪಿ ನಿತ್ಯಾನಂದ ಗೋಸ್ವಾಮಿ ಹಾಗೂ ಅವರ ಖಾಸಗಿ ಭದ್ರತಾ ಅಧಿಕಾರಿ (ಪಿಎಸ್ಒ) ನುಸಿನಾ ಅವರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪರಿಶೀಲಿಸುವುದಕ್ಕೆ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಗುವಾಹಟಿಗೆ ಧಾವಿಸಿದ್ದಾರೆ.
ಕಬ್ರಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಈ ಇಬ್ಬರು ಅಧಿಕಾರಿಗಳು ಉಗ್ರರಿಗೆ ಬಲಿಯಾದರು. ಅಸ್ಸಾಂನಲ್ಲಿ ಇನ್ನೂ ಮೂರು ತಿಂಗಳ ವರೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿ ನಿಯೋಜನೆಯನ್ನು ಮುಂದುವರಿಸುವಂತೆ ರಾಜ್ಯ ಸರ್ಕಾರ ಮಾಡಿಕೊಂಡ ಕೋರಿಕೆಗೆ ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ ನೀಡಿದೆ.
ರಿಜಿಜು ಹಾಗೂ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ ಮಧ್ಯೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.