ಮಂಗಳವಾರ ಬೆಳಿಗ್ಗೆ ‘ಪುಷ್ಕರಂ’ಉತ್ಸವಕ್ಕೆ ಚಾಲನೆ ಲಭಿಸಿತ್ತು. ಮೊದಲ ದಿನ ದೇವರ ದರ್ಶನಕ್ಕೆ ಹೆಚ್ಚು ಜನ ಸೇರಿದ್ದರು. ನದಿಯಲ್ಲಿ ಪುಣ್ಯಸ್ನಾನಕ್ಕಾಗಿ ಜನರು ಸಾಲುಗಟ್ಟಿ ನಿಂತಿದ್ದರು. ಈ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತದಲ್ಲಿ 13 ಮಹಿಳೆಯರು ಸೇರಿದಂತೆ 27 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರೆ ಎಂದು ಪೂರ್ವ ಗೋಧಾವರಿ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕುಲಶೇಖರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ಹೆಚ್ಚಿನವರು ಹಿರಿಯ ನಾಗರಿಕರು. ಈ ಉತ್ಸವ 144 ವರ್ಷಗಳಿಗೊಮ್ಮೆ ನಡೆಯುವುದರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು ಎಂದು ಅವರು ಹೇಳಿದ್ದಾರೆ. 12 ದಿನಗಳ ಈ ಉತ್ಸವ ದಕ್ಷಿಣ ಭಾರತದ ಕುಂಭಮೇಳ ಎಂದೇ ಜನಪ್ರಿಯತೆ ಗಳಿಸಿದೆ.
ಪ್ರಧಾನಿ ಮೋದಿ ಸಂತಾಪ: