ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟೊ ಚಾಲಕನ ಕೊಲೆ

Last Updated 27 ನವೆಂಬರ್ 2014, 19:46 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹೊರ­ವಲಯದ ಉಲ್ಲಾಳ ಉಪನಗರದಲ್ಲಿ ಗುರುವಾರ ರಾತ್ರಿ ಆಟೊ ಚಾಲಕ ಮಹಮದ್‌ ಪೀರ್‌ (38) ಎಂಬು­ವರನ್ನು ದುಷ್ಕರ್ಮಿಗಳು ಮಾರಕಾಸ್ತ್ರ­ಗಳಿಂದ ಕೊಚ್ಚಿ ಕೊಲೆಮಾಡಿದ್ದಾರೆ.

ಮಹಮದ್‌, ಸ್ನೇಹಿತರೊಂದಿಗೆ ಸಂಬಂಧಿಕರ ಮದುವೆಗೆ ಹೋಗಿದ್ದರು. ಮದುವೆ ಮುಗಿಸಿಕೊಂಡು ರಾತ್ರಿ 9.15ರ ಸುಮಾರಿಗೆ ಒಬ್ಬರೇ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಐದು ಬೈಕ್‌ನಲ್ಲಿ ಬಂದ ಹತ್ತು ಮಂದಿ ದುಷ್ಕರ್ಮಿಗಳು ಉಲ್ಲಾಳ ಉಪನಗರದ ಮುಖ್ಯರಸ್ತೆ­ಯಲ್ಲಿ ಅಡ್ಡಗಟ್ಟಿದ್ದಾರೆ. ನಂತರ ಮಚ್ಚಿನಿಂದ ಕೊಚ್ಚಿ ಅವರನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯ­ಗೊಂಡಿದ್ದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಮದ್, ಇತ್ತೀ­ಚೆಗೆ ಗಾಂಜಾ ಮಾರಾಟ ಮಾಡುತ್ತಿದ್ದ ಗುಂಪಿನೊಂದಿಗೆ ಜಗಳ ಮಾಡಿ­ಕೊಂಡಿದ್ದರು. ಆ ಗುಂಪಿನ ಮೂವ­ರನ್ನು ಪೊಲೀಸರು ಬಂಧಿಸಿದ್ದರು.  ಈ ದ್ವೇಷಕ್ಕಾಗಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಹಮದ್‌ ಅವರ ಕುಟುಂಬ ದವರು ಬೀಡಿ ಕಟ್ಟುವ ಕೆಲಸ ಮಾಡುತ್ತಾರೆ. ತಾವರೆಕೆರೆ ಠಾಣೆ­ಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT