ಕಾಬೂಲ್ (ಐಎಎನ್ಎಸ್): ಪೆಶಾವರದ ಸೈನಿಕ ಶಾಲೆಯ ಮೇಲೆ ದಾಳಿ ನಡೆಸಿ 148 ಮಂದಿಯನ್ನು ಹತ್ಯೆ ಮಾಡಿರುವ ಘಟನೆಯನ್ನು ಆಪ್ಘಾನಿಸ್ತಾನದ ತಾಲಿಬಾನ್ ಸಂಘಟನೆ ತೀವ್ರವಾಗಿ ಖಂಡಿಸಿದೆ. ದುರಂತದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ತಾಲಿಬಾನ್ ಸಂಘಟನೆಯ ವಕ್ತಾರ ಜಬಿವುಲ್ಲಾ ಮುಜಾಹೀದ್, ‘ಸತ್ತವರ ಸಂಬಂಧಿಕರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ’ ಎಂದು ಹಾರೈಸಿದ್ದಾನೆ.
ಮುಗ್ಧ ಮಕ್ಕಳು, ಮಹಿಳೆಯರನ್ನು ಉದ್ದೇಶ ಪೂರ್ವಕವಾಗಿ ಹತ್ಯೆ ಮಾಡಿರುವುದು ಇಸ್ಲಾಂ ಧರ್ಮಕ್ಕೆ ವಿರುದ್ಧವಾಗಿದೆ. ಪ್ರತಿಯೊಂದು ಇಸ್ಲಾಮಿಕ್ ಪಕ್ಷ ಮತ್ತು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದಿದ್ದಾನೆ.
ಅಮಾಯಕರು ಮತ್ತು ಮಕ್ಕಳನ್ನು ಹತ್ಯೆ ಮಾಡುವುದನ್ನು ಆಫ್ಘಾನಿಸ್ತಾನ್ ತಾಲಿಬಾನ್ ಸಂಘಟನೆ ಸದಾ ಖಂಡಿಸುತ್ತದೆ ಎಂದು ಹೇಳಿದ್ದಾನೆ.