ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಎಸ್ಎಸ್ ಕಾರ್ಯಕರ್ತನ ಬರ್ಬರ ಹತ್ಯೆ

Last Updated 1 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಕಣ್ಣೂರು, ಕೇರಳ (ಪಿಟಿಐ): ಸದಾ ಒಂದಲ್ಲ ಒಂದು ಗಲಭೆಯಿಂದ ಕುಖ್ಯಾತಿ ಪಡೆದಿರುವ ತಲಶೇರಿ ಬಳಿಯ ಕಥಿರೂರಿನಲ್ಲಿ ಆರ್ಎಸ್ಎಸ್ ಕಾರ್ಯಕರ್ತ­ನೊಬ್ಬ­ನನ್ನು ಸೋಮವಾರ ಅಪರಿಚಿತ ದುಷ್ಕರ್ಮಿಗಳು ನಡು ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಸ್ಥಳೀಯ ಆರ್ಎಸ್ಎಸ್ ಕಾರ್ಯಕರ್ತ ಕೆ. ಟಿ. ಮನೋಜ್ ಎಂಬುವವರನ್ನು ರಸ್ತೆಮಧ್ಯೆ ತಡೆದ ದುಷ್ಕರ್ಮಿಗಳು ಅವರತ್ತ ನಾಡ ಬಾಂಬ್ ಎಸೆದು ನಂತರ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಈ ಕೊಲೆಯ ಹಿಂದೆ ಸಿಪಿಐ ಕೈವಾಡವಿದೆ ಎಂದು ಆಪಾದಿಸಿರುವ ಬಿಜೆಪಿ ಮತ್ತು ಆರ್ಎಸ್ಎಸ್ ಮುಖಂಡರು, ಕೊಲೆಯನ್ನು ಪ್ರತಿಭಟಿಸಿ ಮಂಗಳವಾರ ಕೇರಳ ಬಂದ್‌ಗೆ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT