‘ಅರ್ಜಿಗೆ ಸಂಬಂಧಿಸಿ ಮೂರು ವಾರದೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುತ್ತಿದ್ದೇವೆ’ ಎಂದು ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ಹಾಗೂ ನ್ಯಾಯಮೂರ್ತಿ ಎ.ಕೆ.ಸಿಕ್ರಿ ಅವರಿದ್ದ ಪೀಠ ಹೇಳಿದೆ.
ಆರ್ಟಿಐ ಅಡಿ ಮಾಹಿತಿ ಕೇಳಿ ಅಂತರ್ಜಾಲದ ಮೂಲಕ ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗೆ ಸೂಕ್ತ ವೆಬ್ಸೈಟ್್ ರೂಪಿಸುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಬೇಕು ಎಂದು ಕೋರಿ ವಕೀಲ ಅಮಿತ್ ಕುಮಾರ್್ ಮೂಲಕ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಬಿಹಾರ ಸರ್ಕಾರ ಮಾಡಿರುವಂತೆ ಆರ್ಟಿಐ ಅರ್ಜಿ ಸಲ್ಲಿಸುವುದಕ್ಕೆ ಕಾಲ್್ ಸೆಂಟರ್್ ಸ್ಥಾಪಿಸಬೇಕು ಎಂದೂ ಅರ್ಜಿಯಲ್ಲಿ ಕೋರಲಾಗಿದೆ.