ನವದೆಹಲಿ (ಪಿಟಿಐ): ಆಹಾರ ಭದ್ರತೆ ಕಾಯ್ದೆ ಜಾರಿ ವಿಷಯವಾಗಿ ರಾಜ್ಯ ಸರ್ಕಾರಗಳಿಗೆ ಇನ್ನೂ ಮೂರು ತಿಂಗಳು ಕಾಲಾವಕಾಶ ನೀಡಲು ಕೇಂದ್ರ ಸರ್ಕಾರ ಗುರುವಾರ ನಿರ್ಧರಿಸಿದೆ.
‘ಈ ಮೊದಲು ನೀಡಿದ ಗಡುವು ಜುಲೈ 4ಕ್ಕೆ ಕೊನೆಗೊಳ್ಳಲಿದೆ. ಇದನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗುತ್ತದೆ’ ಎಂದು ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಸುದ್ದಿಸಂಸ್ಥೆಗೆ ತಿಳಿಸಿದರು. ಸಂಬಂಧಪಟ್ಟ ಇಲಾಖೆ ಈ ಕುರಿತು ಆದೇಶ ಹೊರಡಿಸುತ್ತದೆ ಎಂದೂ ಅವರು ಹೇಳಿದರು.