ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಂದ್ ಬಿಸಿ ಹೆಚ್ಚಾಗಿ ತಟ್ಟುವ ಸೂಚನೆಗಳಿವೆ.
ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿಗಳು ಪರಿಸ್ಥಿತಿ ನೋಡಿಕೊಂಡು ಬಸ್ ಸಂಚಾರದ ಕುರಿತು ತೀರ್ಮಾನಿಸಲಿವೆ. ಆದರೆ, ಆಟೊ ಹಾಗೂ ಟ್ಯಾಕ್ಸಿ ಸಂಘಟನೆಗಳು ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿವೆ. ಹೀಗಾಗಿ ಪರ ಊರುಗಳಿಂದ ಬರುವ ಪ್ರಯಾಣಿಕರಿಗೆ ತೊಂದರೆಯಾಗುವ ಆತಂಕ ಎದುರಾಗಿದೆ. ಕೇಂದ್ರೀಯ ವಿದ್ಯಾಲಯಗಳು ಇನ್ನೂ ನಡೆಯುತ್ತಿದ್ದು ಶನಿವಾರ ರಜೆ ನೀಡಿಲ್ಲ.
ಯಶಸ್ಸಿನ ವಿಶ್ವಾಸ: ‘ಬಂದ್ಗೆ ಹೋಟೆಲ್ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ರಿಕ್ಷಾ ಚಾಲಕರ ಸಂಘ, ಪೆಟ್ರೋಲ್ ಬಂಕ್ ಮಾಲೀಕರ ಸಂಘ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ 730 ಸಂಘಟನೆಬೆಂಬಲ ಸೂಚಿಸಿವೆ. ಹೋರಾಟ ಸಂಪೂರ್ಣ ಯಶಸ್ವಿಯಾಗುವ ವಿಶ್ವಾಸ ಇದೆ’ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.
‘ಶನಿವಾರ ಬೆಳಿಗ್ಗೆ 10 ಗಂಟೆಗೆ ಬೃಹತ್ ರ್ಯಾಲಿ ನಡೆಸಿ, ಮುಖ್ಯಮಂತ್ರಿ ಯವರಿಗೆ ಮನವಿ ಸಲ್ಲಿಸಲಾಗುವುದು’ ಎಂದು ವಾಟಾಳ್ ತಿಳಿಸಿದರು.