‘ಇನ್ನು ಎರಡು ದಿನಗಳಲ್ಲಿ ಪಾರ್ಥಿವ ಶರೀರ ಇಲ್ಲಿಗೆ ತಲುಪಲಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ಸಿಯಾಚಿನ್ ಪ್ರದೇಶದಲ್ಲಿನ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ’ ಎಂದು ಶಿಖಾ ಹೇಳಿದರು.
ಪಾರ್ಥಿವ ಶರೀರ ತಲುಪಿದ ನಂತರ ಪಟ್ಟಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು. ಬಳಿಕ ಕುಟುಂಬದವರು ಸೂಚಿಸುವ ಕಡೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ನಾಗೇಶ್ ಶವ ಪತ್ತೆ (ಹಾಸನ ವರದಿ): ಸಿಯಾಚಿನ್ ಹಿಮಪಾತದಲ್ಲಿ ಸಿಲುಕಿ ಮೃತಪಟ್ಟ ಹಾಸನ ತಾಲ್ಲೂಕಿನ ತೇಜೂರು ಗ್ರಾಮದ ಯೋಧ ಟಿ.ಟಿ. ನಾಗೇಶ್ ಶವ ಸಿಕ್ಕಿದೆ ಎಂದು ಮಂಗಳವಾರ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಕುಟುಂಬದವರು ತಿಳಿಸಿದರು.
ಮೃತದೇಹ ತರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಸಿಯಾಚಿನ್ ಪ್ರದೇಶದಲ್ಲಿನ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದ ತಹಶೀಲ್ದಾರ್ ವಿ. ಮಂಜುನಾಥ್, ಯೋಧನ ಶವ ಬುಧವಾರ ಹಾಸನಕ್ಕೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.
ತಹಶೀಲ್ದಾರ್ ವಿ. ಮಂಜುನಾಥ್ ಹಾಗೂ ಇತರ ಅಧಿಕಾರಿಗಳು ಮಂಗಳವಾರ ಮೃತರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.