ನವದೆಹಲಿ(ಪಿಟಿಐ): ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಇಬ್ಬರು ಅಪರಾಧಿಗಳಿಗೆ ವಿಧಿಸಲಾಗಿ ರುವ ಮರಣದಂಡನೆಗೆ ಸುಪ್ರೀಂ ಕೋರ್ಟ್ ಏ.7 ರವರೆಗೆ ತಡೆ ನೀಡಿ ಮಂಗಳವಾರ ಆದೇಶಿಸಿದೆ. ಇದೇ ವೇಳೆ ವಿಚಾರಣಾ ನ್ಯಾಯಾಲಯ ಆದೇಶ ಪ್ರತಿಯನ್ನು ಹಾಜರುಪಡಿಸುವಂತೆ ಹೇಳಿದೆ.
ನ್ಯಾಯಮೂರ್ತಿ ಬಿ.ಎಸ್.ಚೌಹಾಣ್ ಮತ್ತು ಜೆ.ಚಲಮೇಶ್ವರ್ ಈ ಆದೇಶ ನೀಡಿದ್ದು, ಮಾ. 13 ರಂದು ನಾಲ್ವರು ಅಪರಾಧಿಗಳಿಗೆ ಮರಣ ದಂಡನೆ ವಿಧಿಸಿದ್ದ ದೆಹಲಿ ನ್ಯಾಯಾಲಯದ ಆದೇಶವನ್ನು ಪರಿಶೀಲನೆ ನಡೆಸಿದ್ದಾಗಿ ತಿಳಿಸಿದರು. ಇದೇ ವೇಳೆ ಈ ಅಪರಾಧಿಗಳಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಪರಿಶೀಲನೆ ನಡೆಸುವುದಾಗಿ ತಿಳಿಸಿದರು.
ಅತ್ಯಾಚಾರ ಎಸಗಿದ್ದ ಮುಖೇಶ್ ಮತ್ತು ಪವನ್ ಗುಪ್ತಾ ಅವರ ಮರಣದಂಡನೆಯನ್ನು ಏ.7 ರವರೆಗೆ ತಡೆಹಿಡಿಯಲಾಗಿದೆ.
ಸುಪ್ರೀಂಕೋರ್ಟ್ ಈ ಹಿಂದೆ ಈ ಇಬ್ಬರ ಮರಣದಂಡನೆಗೆ ಮಾ.15 ರವರೆಗೆ ತಡೆ ನೀಡಿತ್ತು.