ಶಿಲ್ಲಾಂಗ್, ಅಸ್ಸಾಂ (ಪಿಟಿಐ): ಈಶಾನ್ಯ ಭಾರತದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಅಸ್ಸಾಂ, ಮೇಘಾಲಯಗಳಲ್ಲಿ ಪ್ರವಾಹ ಉಂಟಾಗಿದ್ದು ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಮನೆ–ಮಠಗಳನ್ನು ತೊರೆದಿದ್ದಾರೆ.
ಮೇಘಾಲಯದ ನೈರುತ್ಯ ಗರೊ ಪ್ರರ್ವತ ಶ್ರೇಣಿಗಳಲ್ಲಿ ಉಂಟಾದ ಪ್ರವಾಹದಿಂದ ಏಳು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮನೆಗಳು ಮುಳುಗಿದ್ದು ಲಕ್ಷಾಂತರ ಜನರು ತೊಂದರೆಗೆ ಸಿಲುಕಿದ್ದಾರೆ ಎಂದು ಜಿಲ್ಲಾಧಿಕಾರಿ ರಾಮ್ ಸಿಂಗ್ ಹೇಳಿದ್ದಾರೆ.
ಮಂದಿನ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.