ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರ ದಾಳಿ ತಳ್ಳಿಹಾಕುವಂತಿಲ್ಲ: ರಾಜನಾಥ್‌ ಸಿಂಗ್‌

Last Updated 21 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್ಎಸ್‌): ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಯೋತ್ಪಾದಕರ ದಾಳಿಯ ಸಾಧ್ಯತೆ ತಳ್ಳಿಹಾಕುವಂತಿಲ್ಲ ಎಂದು ಕೇಂದ್ರ ಗೃಹಸಚಿವ ರಾಜನಾಥ್‌ ಸಿಂಗ್‌  ಹೇಳಿದ್ದಾರೆ.

ಮಂಗಳ­ವಾರ ಇಲ್ಲಿ ಕಾರ್ಯಕ್ರಮ­ವೊಂದರಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಬ್ಬದ ಸಮಯದಲ್ಲಿ ಭಯೋತ್ಪಾದಕರ ದಾಳಿಯ ಸಾಧ್ಯತೆ  ಅಲ್ಲಗಳೆಯುವಂತಿಲ್ಲ. ಉಗ್ರರ ದಾಳಿಯ ಬೆದರಿಕೆಗಳಿವೆ ಮತ್ತು ಅದಕ್ಕೆ ಸೂಕ್ತ ಎಚ್ಚರಿಕೆಯನ್ನೂ ನೀಡಲಾಗಿದೆ’ ಎಂದು ತಿಳಿಸಿದರು.

ಹಬ್ಬದ ಸಂಭ್ರಮದ ನಡುವೆ ಉದ್ಭವಿಸಬಹುದಾದ ಕೋಮು­ಗಲಭೆಯ ಸಾಧ್ಯತೆಗಳನ್ನು ನಿಯಂತ್ರಿಸಲು ರಾಜ್ಯಗಳಿಗೆ ಯಾವ ರೀತಿ ನಿರ್ದೇಶನ ನೀಡಲಾಗಿದೆ ಎಂಬ ಪ್ರಶ್ನೆಗೆ ಸಿಂಗ್‌, ‘ನಾವು ಪಡೆದುಕೊಂಡಿರುವ ಮಾಹಿತಿ ಆಧಾರದಲ್ಲಿ ರಾಜ್ಯಗಳಿಗೆ ಸಲಹೆ ನೀಡಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT